ಕೃಷಿಕ ಶ್ರೀ ರಾಮಮೂರ್ತಿ ಜೋಯ್ಸ್ ಮತ್ತು ಶ್ರೀಮತಿ ಯಶೋದಾ ದಂಪತಿಗಳ ಪುತ್ರನಾಗಿ 06-11-1967ರಲ್ಲಿ ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಕೊಂಡಿಬೈಲಿನಲ್ಲಿ ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ಉತ್ತಮೇಶ್ವರದಲ್ಲಿ ಹಾಗೂ ಪದವಿ ಶಿಕ್ಷಣವನ್ನು ಕೊಪ್ಪದಲ್ಲಿ ಪಡೆದಿರುತ್ತಾರೆ. ಪ್ರಸ್ತುತ ಪರಮಪೂಜ್ಯ ಶ್ರೀಶ್ರೀಗಳ ಶ್ರೀಪರಿವಾರದಲ್ಲಿ ಸೇವೆಸಲ್ಲಿಸುತ್ತಿದ್ದು ಶ್ರೀಗುರು ಸೇವಾ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ. ಇವರಿಗೆ ಶ್ರೀಕರಾರ್ಚಿತ ದೇವತಾನುಗ್ರಹ ಹಾಗೂ ಶ್ರೀಗುರು ಆಶೀರ್ವಾದ ಸದಾ ಇರಲೆಂದು ಹಾರೈಕೆ.