“ನಾನೆಷ್ಟು ಅದೃಷ್ಟವಂತ!”- ಶ್ರೀ ಬಿ.ಕೆ.ಎಸ್. ವರ್ಮಾ
ಶುಕ್ರವಾರ, ಜುಲಾಯಿ 23rd, 2010
Editor@HareRaama.in
16 comments
ಶುಕ್ರವಾರ, ಜುಲಾಯಿ 23rd, 2010
Editor@HareRaama.in
16 comments
ಶನಿವಾರ, ಜುಲಾಯಿ 17th, 2010
Editor@HareRaama.in
24 comments
ನನಗೂ ಶ್ರೀರಾಮಚಂದ್ರಾಪುರಮಠಕ್ಕೂ ಸಂಪರ್ಕವಾಗಿದ್ದು ಹಿಂದಿನ ಗುರುಗಳ ಕಾಲದಲ್ಲಿ. ಹಿಂದಿನ ಗುರುಗಳನ್ನು ಒಂದೆರಡು ಬಾರಿ ದರ್ಶನ ಮಾಡುವಂತಹ ಅವಕಾಶ ನನಗೆ ಸಿಕ್ಕಿತ್ತು.
ನನಗೆ ನೆನಪಿದ್ದ ಹಾಗೆ, ಒಂದು ಬಾರಿ ಕೊಲ್ಲೂರಿನಲ್ಲಿ ನಡೆದ ಚಂಡಿಕಾ ಹೋಮದ ಸಂದರ್ಭದಲ್ಲಿ, ಮತ್ತೊಂದೆರಡು ಬೇರೆ ಕಾರ್ಯಕ್ರಮಗಳಲ್ಲಿ ಕೂಡ ಭೇಟಿ ಮಾಡಿದ್ದೆ. ಅವರ ತೇಜಸ್ಸು ಮತ್ತು ಆ ದಿನಗಳಲ್ಲಿ ಸಮಾಜದಲ್ಲಿ ಅವರಿಗಿದ್ದ ವ್ಯಕ್ತಿತ್ವ ಬಹಳ ದೊಡ್ಡದಾಗಿತ್ತು. ಆದರೆ ನನ್ನ ವಯಸ್ಸಿಗೂ ಅವರ ವಯಸ್ಸಿಗೂ ಬಹಳ ಅಂತರ ಇದ್ದಿದ್ದರಿಂದ ಅವರ ಸಾಮೀಪ್ಯದ ಅವಕಾಶ ನನಗೆ ಹೆಚ್ಚಾಗಿ ಸಿಕ್ಕಿರಲಿಲ್ಲ. ಆದರೆ, ರಾಘವೇಶ್ವರ ಪೂಜ್ಯರು ಪೀಠಾಧಿಕಾರಿಗಳಾದ ಮೇಲೆ ಅವರ ಮತ್ತು ನಮ್ಮ ನಡುವೆ ವಿಶ್ವಾಸ ಹೆಚ್ಚಿನದಾಗಿ ಬೆಳೆದಿದೆ. ಅನೇಕ ಬಾರಿ ನಾನು ಶ್ರೀಗಳ ಜೊತೆ ಕಳೆದಿದ್ದೇನೆ. ಅನೇಕ ಸಂದರ್ಭಗಳಲ್ಲಿ ನಾವು ಅವರ ಜೊತೆಗೆ ಖಾಸಗಿಯಾಗಿ ಸಂತೋಷದ ಕ್ಷಣಗಳನ್ನು ಕಳೆದದ್ದೂ ಉಂಟು. ಆತ್ಮೀಯತೆಯಿಂದ ಇಬ್ಬರೂ ನಕ್ಕು ನಲಿದಿದ್ದೇವೆ. ಅವರ ಸಾಮೀಪ್ಯ ನನಗೆ ಬಹಳ ಇಷ್ಟವಾದ ವಿಚಾರ.
ಶುಕ್ರವಾರ, ಜುಲಾಯಿ 9th, 2010
Editor@HareRaama.in
21 comments
ಹೇಗೆ ನೋಡಿದರೂ ಇದೊಂದು ವಿಶ್ವದಾಖಲೆಯೇ. ಬಹುಶಃ ಒಂದು ನಿರ್ದಿಷ್ಟ ವಿಷಯದ ಮೇಲೆ ಬರೋಬ್ಬರಿ ಎಂಟು ಕೋಟಿ ಸಹಿ ಸಂಗ್ರಹಿಸಿರುವುದು, ಅದೂ ಕೇವಲ ಮೂರು ತಿಂಗಳ ಅವಧಿಯಲ್ಲಿ ಇಡೀ ಭಾರತ ಪರ್ಯಟನೆ ಕೈಗೊಂಡು ಇಂಥ ಸಾಧನೆಯನ್ನು ಮಾಡಿದ್ದು ಭಾರತೀಯ ಸಂತಸಮೂಹಕ್ಕೆ ಮಾತ್ರವಲ್ಲ, ಪ್ರತೀ ಭಾರತೀಯನಿಗೂ ಹೆಮ್ಮೆಯ ಸಂಗತಿ.
ಅಬ್ಬಾ, ಆ ವ್ಯಕ್ತಿಯ…ಅಲ್ಲ ಶಕ್ತಿಯ ಕರ್ತೃತ್ವಪರತೆಯೇ !
ಹೌದು, ಶ್ರೀ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಇವತ್ತು ಕೇವಲ ಒಂದು ಪ್ರದೇಶಕ್ಕೆ, ಯಾವುದೇ ಒಂದು ಜನಾಂಗಕ್ಕೆ ಸೀಮಿತವಾಗುಳಿದಿಲ್ಲ. ಅಕ್ಷರಶಃ ಅವರಿಂದು ವಿಶ್ವ ಮಾನವ. ಇಡೀ ಮನುಕುಲಕ್ಕೆ ಸೇರಿದವರು. ದೇಸೀ ಗೋತಳಿಗಳ ಸಂರಕ್ಷಣೆಗೆ ತಮ್ಮ ಇಡೀ ಜೀವಿತಾವಧಿಯನ್ನೇ ಮುಡಿಪಾಗಿಟ್ಟ, ಅದಕ್ಕಾಗಿ ಅತ್ಯಲ್ಪ ಅವಧಿಯಲ್ಲಿ ಇಡೀ ವಿಶ್ವವೇ ಬೆರಗಾಗುವಂಥ ಆಂದೋಲನವನ್ನು ರೂಪಿಸಿದ, ಆ ಮೂಲಕ ಭಾವ ಜಾಗರಣದ ಹೊಂಗಿರಣ ಮೂಡುವಂತೆ ಮಾಡಿದ ಅವರಂಥ ಇನ್ನೊಬ್ಬ ಸಂತರನ್ನು ನಾನು ಕಂಡಿಲ್ಲ.
ಬುಧವಾರ, ಜುಲಾಯಿ 7th, 2010
Info@HareRaama.in
4 comments ‘ಹರ ತನ್ನೊಳಿರ್ದುಂ ಗುರು ತೋರದೇ ತಿಳಿವುದೇ?’ ಎನ್ನುತ್ತಾನೆ ಸರ್ವಜ್ಞ.
ನಮ್ಮೊಳಗೇ ಇರುವ ಭಗವಂತನನ್ನು ಗುರು ತೋರಿಸಿಕೊಡದೇ ಇದ್ದರೆ ನಮಗದು ತಿಳಿಯುವುದಿಲ್ಲ.
ಸಾವಿರ ವರ್ಷಗಳ ಹಿಂದಿನ ಈ ಮಾತಿನ ಅರ್ಥವ್ಯಾಪ್ತಿ ಹಿಂದೆಂದಿಗಿಂತ ಹೆಚ್ಚು ಇಂದು ವಿಸ್ತೃತ! ಅಂದಿನ ಜನಗಳಿಗಾದರೋ ಭಗವಂತನನ್ನು ತೋರಿಸಲು ಮಾರ್ಗದರ್ಶನ ಬೇಕಾಗಿತ್ತು. ಆದರೆ ಇಂದು, ಸ್ವಕೇಂದ್ರೀಕೃತ ಜೀವನಶೈಲಿಯ ಕಾರಣದಿಂದಾಗಿ, ಭಗವಂತನಿರಲಿ, ಕಣ್ಣೆದುರು ಕಾಣುವ ಯಾವ ಉದಾತ್ತವಾದುದನ್ನೂ ನಾವು ಗುರುತಿಸಲು ತಿಳಿದಿಲ್ಲ! ಮಹತ್ತಾದುದನ್ನು ಕಂಡು ಅದನ್ನು ಭಾವಿಸುವ, ಮಾನಿಸುವ ಸೂಕ್ಷ್ಮಪ್ರಜ್ಞೆಯೊಂದನ್ನು ನಾವು ಕಳೆದುಕೊಂಡುಬಿಟ್ಟಿದ್ದೇವೆ. ಮಹಾತ್ಮರು, ಅವರ ಮಹತ್ಕಾರ್ಯಗಳು ಅದೆಷ್ಟೋ ಬಾರಿ ನಮ್ಮ ಶುಷ್ಕಬುದ್ದಿಗೆ, ಕುತಾರ್ಕಿಕ ಮನಸ್ಸಿಗೆ, ದೋಷೈಕಗ್ರಾಹಿ ದೃಷ್ಟಿಗೆ ಹಿರಿದೆನಿಸದೇ ಅವುಗಳ ನೈಜ ಉಪಯೋಗಗಳನ್ನು ಪಡೆಯದಿರುವಂತಾಗಿದೆ. ಹೀಗಾಗಿ ಬೇಕು ಇದು ದೊಡ್ಡದೆಂದು ಸಮಾಜಕ್ಕೆ ತೋರಬಲ್ಲ ಮುಖಂಡರು. ಹಿರಿದಾದನ್ನು ಇನ್ನಷ್ಟು ಸ್ಪುಟವಾಗಿ ಕಾಣುವಂತೆ ಮಾಡುವ ದೃಷ್ಟಿಯೊಂದನ್ನು ಸಮಷ್ಟಿಗೆ ನೀಡುವ ’ಪ್ರಮುಖರು’.