ಶ್ರೀಕ್ಷೇತ್ರ ಗೋಕರ್ಣದ ಅಶೋಕೆಯಲ್ಲಿ ಸಂಪನ್ನಗೊಂಡ ಬ್ರಹ್ಮೈಕ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಂದ್ರಭಾರತೀ ಮಹಾಸ್ವಾಮಿಗಳ ಆರಾಧನಾ ಮಹೋತ್ಸವದ ಶುಭಾವಸರದಲ್ಲಿ, ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ವಚನಾಮೃತಧಾರೆಯಲ್ಲಿ ಹರಿದು ಬಂದ ಪ್ರವಚನ ಮಾಲಿಕೆ. [audio:DailyPravachana/December/Ashirvachana_ragavendra_barati_aradaane_13_Dec_2010.mp3]
ಇಂದು ಆರಾಧನೆ.. ಆದಿಶಂಕರಾಚಾರ್ಯರ ಏಕಮಾತ್ರ ಅವಿಛ್ಛಿನ್ನ ಪರಂಪರೆಯ ಮೂವತ್ತೈದನೆಯ ಧರ್ಮಾಚಾರ್ಯರೂ, ನಮ್ಮ ಪೂರ್ವಾಚಾರ್ಯರೂ ಆದ ಬ್ರಹ್ಮಲೀನ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮಿಗಳವರು ಇಹದ ಬದುಕನ್ನು ಪೂರ್ಣಗೊಳಿಸಿದ ಅಮೃತ ತಿಥಿಯಿಂದು.. ನಮ್ಮೆಲ್ಲರ ಶ್ರೇಯಸ್ಸಿಗಾಗಿ ಗುರುಗಳ ಆರಾಧನೆ ಗೋಕರ್ಣದ ಅಶೋಕೆಯಲ್ಲಿ ಸಂಪನ್ನಗೊಳ್ಳುತ್ತಿರುವ ಈ ಶುಭ ಸಮಯದಲ್ಲಿ ನಿಮ್ಮೆಲ್ಲರಿಗೂ ತೀರದ ಗುರುಕರುಣೆಯನ್ನು ಹಾರೈಸುವೆವು..