ಸಂತರಿಂದ ಮಾತ್ರ ಪರಿವರ್ತನೆ ಸಾಧ್ಯ – ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಸಂದೇಶ ಬೆಂಗಳೂರು : ಸರ್ಕಾರಗಳಿಂದ ಬದಲಾವಣೆ ಸಾಧ್ಯವಿಲ್ಲ, ಸಂತರಿಂದ ಮಾತ್ರ ಪರಿವರ್ತನೆ ಸಾಧ್ಯ. ಗೋ ಪ್ರೇಮಾಧಾರಿತವಾಗಿ ದೇಶವನ್ನು ಕಟ್ಟಬೇಕಾಗಿದ್ದು, ಗೋವನ್ನು ಪ್ರೀತಿಯಿಂದ ನೋಡುವ ದಿನಗಳು ಬರಬೇಕಾಗಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಆಶಿಸಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ… Continue Reading →
ಬೆಂಗಳೂರು : ಗೋರಕ್ಷಕರಿಗೆ ನಮ್ಮ ಬೆಂಬಲವಿದೆ, ಗೋರಕ್ಷಣೆಯನ್ನು ನಾವು ಬೆಂಬಲಿಸುತ್ತೇವೆ ಆದರೆ ಗೋರಕ್ಷಣೆಯ ಹೆಸರಿನಲ್ಲಿ ನಡೆಯುವ ಹಿಂಸೆಗೆ ನಮ್ಮ ಸಹಮತವಿಲ್ಲ. ಸರ್ಕಾರಗಳು ಸರಿಯಾಗಿ ಕೆಲಸ ನಿರ್ವಹಿಸಿದರೆ, ಗೋರಕ್ಷಕರಿಗೆ ಕೆಲಸವೇ ಇರುವುದಿಲ್ಲ. ಭಯೋತ್ಪಾದನಾ ನಿಗ್ರಹದಳ, ನಕ್ಸಲ್ ನಿಗ್ರಹ ದಳ ಇದ್ದಂತೆ ಅಮೂಲ್ಯವಾದ ಗೋಮಾತೆಯ ರಕ್ಷಣೆಗೂ ಒಂದು ತಂಡವನ್ನು ರಚಿಸಿ ಗೋಸಂರಕ್ಷಣೆಯಲ್ಲಿ ಸರ್ಕಾರವೇ ತೊಡಗಿಕೊಳ್ಳಬೇಕು ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ… Continue Reading →
ಬೆಂಗಳೂರು : ಕಾಲಕೆಟ್ಟಿದೆ ಎಂದು ಕೂರುವುದು ತರವಲ್ಲ, ನಮ್ಮ ತನವನ್ನು ಬಿಡಬಾರದು, ನಮ್ಮದೆಂಬ ಅಭಿಮಾನ ಎಂದೂ ಇರಬೇಕು, ಪ್ರವಾಹದ ವಿರುದ್ಧವಾಗಿ ಈಜುವುದಾದರೂ ಸರಿಯೇ, ಸತ್ಯವನ್ನು ಬಿಟ್ಟು ಹೋಗಬಾರದು ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ ಬೆಂಗಳೂರು ಶಾಖಾಮಠದಲ್ಲಿ ಸಂಪನ್ನವಾದ ಗೋಕಥಾದಲ್ಲಿ ಕಲಿಯನ್ನೇ ಕಟ್ಟಿ ‘ರಾಜಾ ಕಾಲಸ್ಯ ಕಾರಣಂ’ ಎಂಬುದನ್ನು ನಿರೂಪಿಸಿದ ಪರೀಕ್ಷಿತನ… Continue Reading →
ಗೋವು ಪ್ರೀತಿಯಿಂದ ಕೊಡುವ ವಸ್ತುಗಳನ್ನು ಬಳಸಿ, ಗೋಹತ್ಯೆಯಿಂದ ಸಿಗುವ ವಸ್ತುಗಳನ್ನು ತ್ಯಜಿಸಿ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಸಂದೇಶ ಬೆಂಗಳೂರು : ನಮ್ಮ ನಗುವಿನ ಹಿಂದೆ ಬೇರೆಯವರ ಅಳುವಿರಬಾರದು, ಬದುಕುವ ಹಕ್ಕು ಮನುಷ್ಯನಿಗೆ ಮಾತ್ರವಲ್ಲ, ಪ್ರಾಣಿಗಳಿಗೂ ಇದೆ. ಗೋವು ಪ್ರೀತಿಯಿಂದ ಕೊಡುವ ವಸ್ತುಗಳನ್ನು ಬಳಸಿ, ಗೋವಿನ ನೋವಿನಿಂದ, ಗೋಹತ್ಯೆಯಿಂದ ಸಿಗುವ ವಸ್ತುಗಳನ್ನು ತ್ಯಜಿಸಿ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ… Continue Reading →
ಗೋವಿನಿಂದಾಗಿ ಭಾರತ ವಿಶ್ವದಲ್ಲಿ ಗುರುತಿಸುವಂತಾಗಲಿ – ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಸಂದೇಶ ಬೆಂಗಳೂರು : ರಕ್ತ ನೋವಿನಿಂದ ಬರುವಂತದ್ದಾಗಿದ್ದು, ಹಾಲು ಪ್ರೀತಿಯಿಂದ ಬರುವಂತದ್ದಾಗಿದೆ. ಗೋವಿನಿಂದ ಬಂದ ಆಹಾರವನ್ನು ಸೇವಿಸಬೇಕು, ಹೊರತಾಗಿ ಗೋವನ್ನೇ ಸೇವಿಸಬಾರದು ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು, ವೀಗನಿಸಮಂನಲ್ಲಿ… Continue Reading →
ಪ್ರೀತಿಯಿಂದ ಗೆಲ್ಲಬೇಕು, ಭೀತಿಯಿಂದಲ್ಲ – ಗೋಕಥಾದಲ್ಲಿ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಸಂದೇಶ ಬೆಂಗಳೂರು : ದೇವರು ಕಾಣುವುದಿಲ್ಲಾ ಎಂದು ಹೇಳುತ್ತೇವೆ, ಕಾಣುವ ಎಲ್ಲಚೇತನಗಳಲ್ಲಿ, ವಸ್ತುಗಳಲ್ಲಿ ದೇವರನ್ನು ಕಾಣುವುದು ಭಾರತೀಯ ಸಂಸ್ಕೃತಿ. ಆದರೆ ಇಂದು ಪರಿಸರದ ಬಗ್ಗೆ, ಗೋವಿನಂತಹ ಸೃಷ್ಟಿಯ ಅದ್ಭುತಗಳ ಬಗ್ಗೆ ಪೂಜ್ಯ ಭಾವನೆ ನಷ್ಟವಾಗುತ್ತಿರುವುದೇ ಅನರ್ಥಕ್ಕೆ ಕಾರಣವಾಗಿದ್ದು, ಪರಿಸರ ನಾಶ, ಗೋವಿನ ವಿನಾಶಕ್ಕೆ ಕಾರಣವಾಗಿದೆ ಎಂದು… Continue Reading →
ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ ಕಾರ್ಯಕ್ರಮವು ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ‘ಆನಂದದ ಯುಗ ಜಗಕವತರಿಸಲಿ! ಗೋವಿಂದ!’ ಎಂಬ ಹಿನ್ನೆಲೆಯಲ್ಲಿ ಆಚರಿತವಾಗುತ್ತಿದ್ದು, ಗೋಚಾತುರ್ಮಾಸ್ಯದ ಈ ಸುಸಂದರ್ಭದಲ್ಲಿ ಕೃಷ್ಣಾಷ್ಟಮಿಯ ಕಾರ್ಯಕ್ರಮವನ್ನು ವಿಶೇಷವಾಗಿ ವಿವಿಧ ಕಾರ್ಯಕ್ರಮ ವೈವಿಧ್ಯಗಳೋಂದಿಗೆ ಆಚರಿಸಲಾಯಿತು. ಮಾತೆಯರಿಂದ ಮೊಸರು ಕಡೆಯುವುದು, ಕೃಷ್ಣವೇಷದಾರಿ ಮುದ್ದು ಮಕ್ಕಳಿಗೆ ಬೆಣ್ಣೆಯನ್ನು ತಿನ್ನಿಸುವುದು, ರಾಧಾ – ಯಶೋಧ ಎಂಬ ವಿನೂತನ ಆಟ, ಕೋಲಾಟ ಸೇರಿದ… Continue Reading →
ಗೋವು ಯೋಗಿಗೂ ಯೋಗವನ್ನು ತಂದುಕೊಡುತ್ತದೆ – ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಸಂದೇಶ ಬೆಂಗಳೂರು : ನಮ್ಮ ದೇಶದಲ್ಲಿ ಗೋವಿಗಾಗಿ ಪ್ರಾಣಕೊಟ್ಟವರು ಇದ್ದಾರೆ, ನಾವು ದೇಶೀ ಗೋವಿನ ಹಾಲು ಕುಡಿಯುವ ಸಂಕಲ್ಪ ಮಾಡುವುದರ ಮೂಲಕ ಗೋವನ್ನು ಉಳಿಸಿಕೊಳ್ಳೋಣ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ… Continue Reading →
ನಮ್ಮ ಹಿತವನ್ನು ನಾವೇ ಕಾಯ್ದುಕೊಳ್ಳಬೇಕು. – ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಸಂದೇಶ ಬೆಂಗಳೂರು : ನಮ್ಮ ಹಿತವನ್ನು ನಾವೇ ಕಾಯ್ದುಕೊಳ್ಳಬೇಕು, ಆರೋಗ್ಯಪೂರ್ಣವಾದ ಆಹಾರವನ್ನೇ ಸ್ವೀಕರಿಸಬೇಕು, ಸುಲಭದಲ್ಲಿ ಸಿಗುತ್ತದೆ, ಕಡಿಮೆ ದರದಲ್ಲಿ ಸಿಗುತ್ತದೆ ಎಂದು ವಿಷವನ್ನು ಸೇವಿಸಲಾಗದು. ಅಮೃತವನ್ನು ಬೆಳೆಯಬೇಕು, ಅಮೃತವನ್ನೇ ಉಣ್ಣಬೇಕು ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ… Continue Reading →