ಇಷ್ಟೋ ಅಷ್ಟೋ ಈಶ್ವರನಿಗೆ ಸಮರ್ಪಿಸಿ, ‘ನಾನೊಬ್ಬ ಮಹಾದಾನಿ’ ಎಂದು ಗರ್ವಪಡಬೇಡ..
ಏಕೆಂದರೆ ನಿನ್ನಲ್ಲಿರುವುದಷ್ಟೂ ಈಶ್ವರನದೇ ಆಗಿದೆ..
ತೋಟದ ಆಳು ಮಾಲೀಕನಿಗೆ ತೋಟದಿಂದ ನಾಲ್ಕು ಎಳನೀರು ಕಿತ್ತುಕೊಟ್ಟು, ಕೊಟ್ಟೆನೆಂದು ಬೀಗಲುಂಟೇ?
ತೋಟದಲ್ಲಿ ಬೆಳೆದುದೆಲ್ಲವನ್ನೂ ಕೊಟ್ಟು ವಿನಯದಿಂದ ತಲೆಬಾಗಬೇಕಾದುದಲ್ಲವೇ ಕರ್ತವ್ಯ ?
‘ಮೆರೆಯದಿರು ನಾ ಮಹಾದಾನಿಯೆಂದು
ಮರೆಯದಿರು ನೀ ಮಾಲಿ, ಅವನೇ ಮಾಲೀಕನೆಂದು’
॥ತ್ವದೀಯಂ ವಸ್ತು ಗೋವಿಂದ ತುಭ್ಯಮೇವ ಸಮರ್ಪಯೇ ॥
ಹರೇ ರಾಮ ವಿಶ್ವದ ವಿರಾಟ್ ಪುರುಷ, ನಮ್ಮ ದೇಹದಲ್ಲಿ ಸ್ವರಾಟ್ ಪುರುಷನಾಗಿ ವಿಹರಿಸುವ ರಾಮ… ಇತ್ತ ದೇವರುಗಳು, ಅತ್ತ ಜೀವರುಗಳು… ಇತ್ತ ಪರಮಾತ್ಮ, ಅತ್ತ ಸಂಸಾರ… ಮಧ್ಯೆ ನಾವು..! ನಿನ್ನೆಬೆಳಗ್ಗೆ ನಡೆದದ್ದು ೯೯೯೯ ನೆಯ ಪೂಜೆ. ಅದರಲ್ಲಿನ ಅಂಕೆಗಳನ್ನು ಕೂಡಿದರೆ ೩೬ ಬರುವುದು. ನಾವು ಮೂವತ್ತಾರನೆಯ ಪೀಠಾಧಿಪತಿಗಳು…! ಹಾಗೆಯೇ ನಾವು ೯ನೆಯ ರಾಘವೇಶ್ವರರು…! ಈ ಎರಡು… Continue Reading →