ಶ್ರೀರಾಮನ ನಂತರದ ಸೂರ್ಯವಂಶದ ಭವಿಷ್ಯದ ಕುರಿತು ಬಂದಿರುವ ಹಲವಾರು ಪ್ರಶ್ನೆಗಳಿಗೆ ಶ್ರೀ ಭಾಗವತದಲ್ಲಿ ಕಂಡುಬರುವ ಉತ್ತರವಿದು..

• ಪ್ರಭು ಶ್ರೀರಾಮಚಂದ್ರನಿಗೆ ಲವ-ಕುಶರೀರ್ವರು ಮಕ್ಕಳು..
• ಭರತನಿಗೆ ತಕ್ಷ-ಪುಷ್ಕಲರು..
• ಲಕ್ಷ್ಮಣನಿಗೆ ಅಂಗದ-ಚಂದ್ರಕೇತುಗಳು..
• ಶತ್ರುಘ್ನನಿಗೆ ಸುಬಾಹು-ಶತ್ರುಪಾತಿಗಳು..
• ಇವರಲ್ಲಿ ಹಿರಿಯವನಾದ ಕುಶನು ಕುಮುದ್ವತಿಯನ್ನು ವರಿಸಿ ಕುಶಾವತಿ ಅಥವಾ ಕುಶಸ್ಥಲಿಯಲ್ಲಿ ರಾಜ್ಯವಾಳುತ್ತಾನೆ..
• ಲವನು ಶ್ರಾವಸ್ತಿ ಅಥವಾ ಲವಸ್ಥಲಿಯಲ್ಲಿ, ತಕ್ಷನು ತಕ್ಷಶಿಲೆಯಲ್ಲಿ, ಪುಷ್ಕಲನು ಪುಷ್ಕಲಾವತದಲ್ಲಿ, ಅಂಗದನು ಕಾರುಪಥದಲ್ಲಿ,ಚಂದ್ರಕೇತುವು ಚಂದ್ರಕಾಂತದಲ್ಲಿ, ಸುಬಾಹು ಮಧುರಾನಗರಿಯಲ್ಲಿ, ಶತ್ರುಪಾತಿಯು ವಿದಿಶಾನಗರಿಯಲ್ಲಿ ರಾಜ್ಯವಾಳಿದರು..
• ಕುಶ-ಕುಮುದ್ವತೀ ದಂಪತಿಗಳಿಂದ ಅತಿಥಿ.
• ಅವನಿಂದ ನಿಷಧ
• ನಭ
• ಪುಂಡರೀಕ
• ಕ್ಷೇಮಧನ್ವಾ
• ದೇವಾನೀಕ
• ಅನೀಹ
• ಪಾರಿಯಾತ್ರ
• ಬಲಸ್ಥಲ
• ಇವನಿಗೆ ಸೂರ್ಯನ ಅಂಶವನ್ನು ಪಡೆದ ವಜ್ರನಾಭನು ಮಗನಾಗಿ ಹುಟ್ಟಿದ.
• ಇವನ ಮಗ ಖಗಣ
• ವಿಧೃತಿ
• ಹಿರಣ್ಯನಾಭ. ಇವನು ಮಹರ್ಷಿಜೈಮಿನಿಯ ಶಿಷ್ಯನಾಗಿ ಯೋಗಾಚಾರ್ಯನೆಂದು ಖ್ಯಾತನಾಗಿದ್ದ.ಕೋಸಲದೇಶದ ಯಾಜ್ಞವಲ್ಕ್ಯಮಹರ್ಷಿಯು ಹಿರಣ್ಯನಾಭನಿಂದ ಅಧ್ಯಾತ್ಮಶಿಕ್ಷಣವನ್ನು ಪಡೆದ.
• ಹಿರಣ್ಯನಾಭನ ಮಗ ಪುಷ್ಯ
• ಧ್ರುವಸಂಧಿ
• ಸುದರ್ಶನ
• ಅಗ್ನಿವರ್ಣ
• ಶೀಘ್ರ
• ಮರು.ಈ ಮರುವು ಯೋಗಸಮಾಧಿಯಲ್ಲಿ ಸಿದ್ಧಿಯನ್ನು ಪಡೆದಿದ್ದ.ಈಗಲೂ ಈ ಮರುಮಹಾರಾಜನು ಕಲಾಪವೆಂಬ ಗ್ರಾಮದಲ್ಲಿವಾಸಿಸುತ್ತಿದ್ದಾನೆ.ಕಲಿಯುಗದ ಅಂತ್ಯದಲ್ಲಿ ಸೂರ್ಯವಂಶವು ನಷ್ಟವಾದಾಗ ಇವನು ಪುನರಪಿ ಸೂರ್ಯವಂಶವನ್ನು ಬೆಳೆಸುತ್ತಾನೆ.
• ಮರುವಿನ ಮಗ ಪ್ರಸುಶ್ರುತ
• ಸಂಧಿ
• ಅಮರ್ಷಣ
• ಮಹಸ್ವಂತ
• ವಿಶ್ವಸಾಹ್ವ
• ಪ್ರಸೇನಜಿತ್
• ತಕ್ಷಕ
• ಬೃಹದ್ಬಲ-ಈ ಬೃಹದ್ಬಲನನ್ನು ಕುರುಕ್ಷೇತ್ರಯುದ್ಧದಲ್ಲಿ ಅಭಿಮನ್ಯುವು ಸಂಹರಿಸಿದ.
• ಬೃಹದ್ಬಲನ ಮಗ ಬೃಹದ್ರಣ
• ಉರುಕ್ರಿ
• ವತ್ಸವೃದ್ಧ
• ಪ್ರತಿವ್ಯೋಮ
• ಭಾನು
• ದಿವಾಕ
• ಸಹದೇವ
• ಬೃಹದಶ್ವ
• ಭಾನುಮಂತ
• ಪ್ರತೀಕಾಶ್ವ
• ಸುಪ್ರತೀಕ
• ಮರುದೇವ
• ಸುನಕ್ಷತ್ರ
• ಪುಷ್ಕರ
• ಅಂತರಿಕ್ಷ
• ಸುತಪಸ
• ಅಮಿತ್ರಜಿತ್
• ಬೃಹದ್ರಾಜ
• ಬರ್ಹಿ
• ಕೃತಂಜಯ
• ರಣಂಜಯ
• ಸಂಜಯ
• ಶಾಕ್ಯ
• ಶುದ್ಧೋದ
• ಲಾಂಗಲ
• ಪ್ರಸೇನಜಿತ್
• ಕ್ಷುದ್ರಕ
• ರಣಕ
• ಸುರಥ..
ಈ ಸುರಥನಿಗೆ ಸೂರ್ಯವಂಶದ ಕೊನೆಯ ರಾಜನಾದ ಸುಮಿತ್ರನು ಮಗನಾಗಿ ಹುಟ್ಟಿದನು.
ಇವರೆಲ್ಲರೂ ಇಕ್ಷ್ವಾಕು ವಂಶಸಂಭೂತರು.
ಸುಮಿತ್ರನ ನಂತರ ಕಲಿಯುಗದಲ್ಲಿ ಈ ವಂಶವು ಮರೆಯಾಯಿತು.
ಅಂದ ಮಾತ್ರಕ್ಕೆ ಸೂರ್ಯವಂಶವು ನಾಶವಾಗಿಹೋಯಿತೆಂದೇನಲ್ಲ..!
ಸೂರ್ಯ ಹೇಗೆ ಶಾಶ್ವತನೋ ಸೂರ್ಯವಂಶವೂ ಅಂತೆಯೇ ಶಾಶ್ವತವಾದುದು..
ಈ ಹಿಂದೆ ಪ್ರಸ್ತಾಪಿಸಿದಂತೆ ಈಗಲೂ ಕಲಾಪವೆಂಬ ಗ್ರಾಮದಲ್ಲಿ ಅಂತರ್ಹಿತನಾದ ಮರುಮಹಾರಾಜನು ಪುನಃ ಈ ಯುಗದ ಅಂತ್ಯದಲ್ಲಿ ಸೂರ್ಯವಂಶವನ್ನು ಉದ್ಧರಿಸುತ್ತಾನೆ.

ಇದು ಶ್ರೀಮದ್ಭಾಗವತದಲ್ಲಿ ಶುಕಮಹರ್ಷಿಗಳು ಪರೀಕ್ಷಿತ ಮಹಾರಾಜನಿಗೆ ಹೇಳಿದ ರಘುಂಶದ ವರ್ಣನೆ.
Facebook Comments Box