ದಿನಾಂಕ:೧೭-೧೦-೨೦೧೦ ಸೂರ್ಯೋದಯ:೦೬.೨೪ ಸೂರ್ಯಾಸ್ತ:೦೬.೦೭ ಪಕ್ಷ:ಶುಕ್ಲ ತಿಥಿ:ದಶಮಿ (ವಿಜಯ ದಶಮಿ) ಭಿಕ್ಷಾ ಸೇವೆ:ಕೃಷ್ಣಪ್ರಸಾದ್ ಎಡಪ್ಪಾಡಿ ವೈಯಕ್ತಿಕ ಪಾದುಕಾ ಪೂಜೆ: ೧)ವಿನಾಯಕ ಹೆಗಡೆ, ಮಲ್ಲೇಶ್ವರ ೨)ಸೂರ್ಯನಾರಾಯಣ ಶರ್ಮ, ಗಿರಿನಗರ ೧೧.೩೦ ರಿಂದ ೧೧.೫೦ ಯಾಗದ ಪೂರ್ಣಾಹುತಿ ಮತ್ತು ಶ್ರೀ ರಾಮಪಟ್ಟಾಭಿಷೇಕದಲ್ಲಿ ಸಾನ್ನಿಧ್ಯ ೧೨.೦೦ ರಿಂದ ೧೨.೪೫ ಪಾದುಕಾ ಪೂಜೆ ಮಂಗಳಾರತಿ, ಫಲಸಮರ್ಪಣೆ, ತೀರ್ಥ ವಿತರಣೆ ೧೨.೫೦ ರಿಂದ ೦೧.೦೦… Continue Reading →
|| ಹರೇರಾಮ || ಗಂಗೆಗೆ ಗಂಗೆಯೆಂಬ ಹೆಸರು ಎಂದು ಬಂದಿತೋ, ಅಂದಿದ್ದ ಜಲಪ್ರವಾಹ ಇಂದಿಲ್ಲ… ಅದು ಹರಿದು ಸಮುದ್ರವನ್ನು ಸೇರಿ ಅದೆಷ್ಟೋ ಕಾಲವಾಯಿತು..! ಅಂದಿನಿಂದ ಇಂದಿನವರೆಗೆ ಗಂಗೋತ್ರಿಯಿಂದ ಗಂಗಾಸಾಗರಕ್ಕೆ ಅದೆಷ್ಟು ನೀರು ಹರಿದಿಲ್ಲ..? ಪ್ರತಿಕ್ಷಣವೂ ಹಳೆಯನೀರು ಹರಿದುಹೋಗಿ ಹೊಸನೀರು ಬರುತ್ತಿದ್ದರೂ ಗಂಗೆಯೆಂಬ ಹೆಸರು ಮಾತ್ರ ಬದಲಾಗಲೇ ಇಲ್ಲ.. ಏಕೆಂದರೆ, ಅಲ್ಲಿ ಹರಿದುಹೋದ ಹಳೆಯನೀರೂ ಗಂಗೆಯೇ, ಹರಿದು… Continue Reading →
“ಕಾರಣಗುಣಗಳು ಕಾರ್ಯಗಳಲ್ಲಿ ಕಾಣಿಸಿಕೊಳ್ಳುವುದು ನಿಸರ್ಗ ನಿಯಮ”..
ನೂಲಿನ ಬಣ್ಣ ಬಟ್ಟೆಯಲ್ಲಿ, ಬೀಜದ ಗುಣ ವೃಕ್ಷದಲ್ಲಿ, ತಾಯಿಯ ಸ್ವಭಾವ ಮಕ್ಕಳಲ್ಲಿ ಸಂಕ್ರಮಿಸುವುದು ಲೋಕದಲ್ಲಿ ನಿತ್ಯದರ್ಶನದ ವಿಷಯ…
ಅಂತೆಯೇ ಕಾರಣಪುರುಷನಾದ ಸೂರ್ಯದೇವನ ಗುಣಗಳೆಲ್ಲವೂ ಸೂರ್ಯವಂಶದ ರಾಜರುಗಳಲ್ಲಿ ಸೂರ್ಯನಷ್ಟೇ ಸ್ಪಷ್ಟವಾಗಿ ಗೋಚರಿಸಿದವು..
ಸೂರ್ಯನು ದಿವಿಯ ಮಧ್ಯದಲ್ಲಿ ನಿಂತು ಭುವಿಯನ್ನು ಬೆಳಗಿದರೆ, ಸೂರ್ಯವಂಶೀಯರು ಭುವಿಯ ಮಧ್ಯದಲ್ಲಿ ನಿಂತು ಜೀವರಾಶಿಗಳ ಜೀವನವನ್ನೇ ಬೆಳಗಿದರು..!
ಸೂರ್ಯನು ಕತ್ತಲೆಯ ವೈರಿಯಾದರೆ..
ಸೂರ್ಯವಂಶೀಯರು ಕೆಡುಕಿನ ವೈರಿಗಳು..