ಕಣ್ಣು- ಕಿವಿಗಳಿಗೆ ಆರಂಗುಲವೇ ಅಂತರ.. ಆದರೆ ಕಾರ್ಯವಿಧಾನದಲ್ಲಿ ಮಹದಂತರ..! ಕಣ್ಣುಗಳು ಸಮಕಾಲದಲ್ಲಿ ನಮ್ಮೆದುರು ನಡೆಯುತ್ತಿರುವುದನ್ನು ಮಾತ್ರವೇ ಕಾಣಬಲ್ಲವು.. ಕಿವಿಗಳು ?? ಎಂದೋ , ಎಲ್ಲಿಯೋ ನಡೆದದ್ದನ್ನು ಮತ್ತೆಂದೋ, ಮತ್ತೆಲ್ಲಿಯೋ ಕಾಣಬಲ್ಲವು !! ಮುಂದೆಂದೋ ನಡೆಯುವುದನ್ನು ಇಂದೇ ನೋಡಬಲ್ಲವು !! ಕಣ್ಣಿಗೆ ಒಂದು ಘಂಟೆಯ ಘಟನೆಯನ್ನು ಕಾಣಲು ಒಂದು ಘಂಟೆಯೇ ಬೇಕು.. ಕಿವಿಗೆ ಒಂದು ಜೀವನವಿಡೀ ನಡೆದ… Continue Reading →
||ಹರೇ ರಾಮ||
ರಾಜನೆಂದರೆ ರಾಜ್ಯದ ಆತ್ಮ..
ಮಂತ್ರಿಯೆಂದರೆ ರಾಜ್ಯದ ಬುದ್ಧಿ..
ಯಾವುದರ ಪರಿವೆ ಇಲ್ಲದೆಯೂ ಆತ್ಮವು ಇರಬಹುದು…ಆದರೆ ಬುದ್ಧಿಯು ಸದಾ ಎಚ್ಚರವಾಗಿರಲೇಬೇಕು…ಶರೀರದ, ಮನಸ್ಸಿನ,ಇಂದ್ರಿಯಗಳ,ಹೆಚ್ಚೇಕೆ ಬದುಕಿನ ಸಮಸ್ತ ಆಗು-ಹೋಗುಗಳನ್ನು ಗಮನಿಸುವ-ನಿಯಂತ್ರಿಸುವ ಹೊಣೆಗಾರಿಕೆ ಅದರದ್ದೇ ಅಲ್ಲವೇ..?
ಮನನವೆಂದರೆ ಅರಿಯುವುದು..
ತ್ರಾಣವೆಂದರೆ ಪೊರೆಯುವುದು…
ಮನನ-ತ್ರಾಣಗಳೆರಡೂ ಹುದುಗಿವೆ ಮಂತ್ರದಲ್ಲಿ..
ಮಂತ್ರವುಳ್ಳವನು ಮಂತ್ರಿಯೆಂದಾದಮೇಲೆ ಆತನಿಗೆ ಎರಡೇ ಮುಖ್ಯಕಾರ್ಯಗಳು..
ಅರಿಯುವುದು ಮತ್ತು ಪೊರೆಯುವುದು…
ಎಲ್ಲವನ್ನೂ ಅರಿಯುವ, ತನ್ಮೂಲಕ ಎಲ್ಲರನ್ನೂ ಪೊರೆಯುವ ಕರ್ತವ್ಯವವನದ್ದು..
ಅರಿವು ಪೊರೆಯುವಂತೆ ಮತ್ಯಾವುದು ತಾನೇ ಪೊರೆಯಲು ಸಾಧ್ಯ..?
ಬದುಕು ಸಮೃದ್ಧವಾಗಬೇಕು..
ಬದುಕು ಸಾರ್ಥಕವೂ ಆಗಬೇಕು..
ಬದುಕು ಸಮೃದ್ಧವಾಗಲು ತಾಯಿ ಲಕ್ಷ್ಮಿಯ ಕೃಪೆ ಬೇಕು..
ಬದುಕು ಸಾರ್ಥಕವಾಗಲು ತಂದೆ ನಾರಾಯಣನ ಕೃಪೆ ಬೇಕು..
ಲಕ್ಷ್ಮಿಯು ಅರ್ಥದ ರೂಪದಲ್ಲಿ ಹರಿಯುತ್ತಿದ್ದರೆ ಬದುಕಿಗೆ ಸಮೃದ್ಧಿ..
ನಾರಾಯಣನು ಧರ್ಮದ ರೂಪದಲ್ಲಿ ನೆಲೆ ನಿಂತರೆ ಬದುಕಿಗೆ ಸಾರ್ಥಕತೆ..
ಧರ್ಮವು ನೆಲೆ ನಿಲ್ಲಬೇಕೆಂದರೆ ಅರ್ಥವು ಸರಿಯಾದ ದಾರಿಯಲ್ಲಿ ಹರಿಯುತ್ತಲೇ ಇರಬೇಕು..
ಅರ್ಥವು ಧರ್ಮದ ದಾರಿಯಲ್ಲಿ ಒಳಹರಿದು ಬರಬೇಕು..
ಅರ್ಥವು ಧರ್ಮದ ದಾರಿಯಲ್ಲಿಯೇ ಹೊರಹರಿದು ಹೋಗಬೇಕು..
ಇದು ಅಯೋಧ್ಯೆಯ ಅರ್ಥ ನೀತಿ..
ಬದುಕು ಮುಂದೆ ಸಾಗಬೇಕು..
ಆದರೆ ಅದು ಸರಿಯಾದ ದಾರಿಯಲ್ಲಿ ಮುಂದೆ ಸಾಗಬೇಕು..
ಬದುಕು ಮುಂದೆ ಸಾಗಲು ಬೇಕು “ಪ್ರೀತಿ”
ಅದು ಸರಿಯಾದ ದಾರಿಯಲ್ಲಿ ಸಾಗಲು ಬೇಕು “ನೀತಿ”
ಬದುಕು ಚಲಿಸಲು ಬೇಕು ’ಪ್ರೀತಿ” ಎಂಬ ಚಾಲನಾಶಕ್ತಿ..
ಅದು ನಿಜವಾದ ಲಕ್ಷ್ಯದೆಡೆಗೆ ಚಲಿಸಲು ಬೇಕು “ನೀತಿ ’ಎಂಬ ಚಾಲಕ..
ಶೂರ್ಪಣಖೆಗೆ ರಾಮನ ಕುರಿತು, ಅವಳ ಅಣ್ಣನಿಗೆ ಸೀತೆಯ ಕುರಿತು ಇದ್ದಿದ್ದು ಪ್ರೀತಿಯಲ್ಲ..ಏಕೆಂದರೆ ಅಲ್ಲಿ ನೀತಿಯಿರಲಿಲ್ಲ..
ನೀತಿಗೆ ಸಲ್ಲದ ಪ್ರೀತಿಯು ಪ್ರೀತಿಯೇ ಅಲ್ಲ..!!
|| ಹರೇ ರಾಮ || ದೀಪ ಬೆಳಗಬೇಕು.. ದೀಪ ಬೆಳಗಬೇಕೆಂದರೆ ಬತ್ತಿಗಳು ಉರಿಯಬೇಕು.. ದೀಪವು ದೀರ್ಘಕಾಲ ಬೆಳಗಬೇಕೆಂದರೆ ಎಣ್ಣೆಯು ಸದ್ದಿಲ್ಲದೆಯೇ ಆತ್ಮಾರ್ಪಣೆ ಮಾಡಿಕೊಳ್ಳಬೇಕು.. ತಾನು ಆರಿ ದೀಪವನ್ನು ಉರಿಸಬೇಕು… ತನ್ನ ಆಯುಸ್ಸನ್ನು ಜ್ಯೋತಿಗೆ ಧಾರೆಯೆರೆಯಬೇಕು.. ದೀಪದ ಧವಲಪ್ರಭೆಗಾಗಿ ದೀಪಪಾತ್ರವು ತನ್ನ ಮೈಯೆಲ್ಲವನ್ನೂ ಮಸಿಯಾಗಿಸಿಕೊಳ್ಳಬೇಕು.. ದೀಪವು ಪ್ರಜ್ವಲಿಸಿ ಪ್ರಕಟಗೊಂಡರೆ ಇವು ಕಂಡೂ ಕಾಣಿಸದವು..!! ತಾವು ಮರೆಯಲ್ಲಿ ನಿಂತು… Continue Reading →
|| ಹರೇರಾಮ || ಕೆಲವರನ್ನು ಹಲವು ಕಾಲ ಮೆಚ್ಚಿಸಬಹುದು.. ಹಲವರನ್ನು ಕೆಲವು ಕಾಲ ಮೆಚ್ಚಿಸಬಹುದು.. ಬಹುಜನರನ್ನು ಬಹುಕಾಲ ಮೆಚ್ಚಿಸುವುದು ಬಲು ಕಠಿಣದ ಮಾತು.. ಆದರೆ ದಶರಥನಿಗಿದು ಕಠಿಣವೆನಿಸಲೇ ಇಲ್ಲ.. ನೀರಿನಲ್ಲಿ ಬೆರೆಸಿದ ಸಕ್ಕರೆ ಬಿಂದು- ಬಿಂದುವನ್ನೂ ಬಿಡದೆ ವ್ಯಾಪಿಸುವಂತೆ ದಶರಥನ ರಾಜ್ಯಭಾರ ಕೌಶಲದ ಸವಿಫಲ ವ್ಯಕ್ತಿ-ವ್ಯಕ್ತಿಗಳನ್ನೂ ತಲುಪಿತು… ಸೂರ್ಯನು ಒಂದು ಬಾರಿಗೆ ಭೂಮಿಯ ಒಂದು ಪಾರ್ಶ್ವವನ್ನು… Continue Reading →
|| ಹರೇರಾಮ || “ಉದ್ಧರಿಸುವೆನು ಜಗವನೆನ್ನುತಿಹ ಸಖನೆ ನಿನ್ನುದ್ಧಾರವೆಷ್ಟಾಯ್ತೋ ?” ಲೋಕವನ್ನು ಸುಧಾರಿಸಬಯಸುವವನು ಆ ಪ್ರಕ್ರಿಯೆಯನ್ನು ತನ್ನಿಂದಲೇ ಪ್ರಾರಂಭಿಸಬೇಕು.. ನಮ್ಮ ಪಾಲಿನ ಲೋಕದ ದ್ವಾರಗಳೆಂದರೆ ನಮ್ಮ ಶರೀರ-ಮನಸ್ಸುಗಳು ; ನಮ್ಮ ವ್ಯಕ್ತಿತ್ವ- ಬದುಕುಗಳು.. ಜಗತ್ತು ನಮ್ಮ ಮುಂದೆ ತೆರೆದುಕೊಳ್ಳುವುದು, ನಮಗೆ ಸ್ಪಂದಿಸುವುದು ಇವುಗಳ ಮೂಲಕವಾಗಿಯೇ…! ಇವುಗಳನ್ನು ಚೆನ್ನಾಗಿಟ್ಟುಕೊಳ್ಳದವನ ಪಾಲಿಗೆ ಜಗತ್ತು ಚೆನ್ನಾಗಿರಲು ಸಾಧ್ಯವೇ ಇಲ್ಲ.. ಮನೆ… Continue Reading →
|| ಹರೇರಾಮ || ಬೇರೆಯಾಗುವುದು ಸುಲಭ… ಬೆರೆಯುವುದು ಸುಲಭವಲ್ಲ..! ವಿಭಕ್ತಿ ಸುಲಭ.. ಭಕ್ತಿ ಸುಲಭವಲ್ಲ.. ಒಡೆಯಲು ಕ್ಷಣ… ಕೂಡಿಸಲು..? ವಿಶ್ವದ ಯಾವೆರಡು ವಸ್ತುಗಳು ಸೇರಬೇಕೆಂದರೂ ಅದು ಸುಲಭದ ಮಾತಲ್ಲ.. ಅದರಲ್ಲಿಯೂ ಹಿರಿದರಲ್ಲಿ ಹಿರಿದಾದ ವಸ್ತುಗಳೆರಡು ಸೇರಬೇಕೆಂದರೆ..? ಕೂಡಿಸುವ ಕೊಂಡಿಯೊಂದು ನಡುವೆ ಬೇಕೇ ಬೇಕು.. ಜೀವನು ದೇವನೊಡನೆ ಸೇರಬೇಕೆಂದರೆ ‘ಗುರು‘ವೆಂಬ ಕೊಂಡಿ ನಡುವೆ ಬೇಕೇ ಬೇಕಲ್ಲವೇ..? ದೇವನೇ… Continue Reading →