Category ಬ್ಲಾಗ್

Sri Swamiji will blog here with a live and current topic. Blog would be either spiritual or general. Pick your interest.

ಅರುಣೋದಯವಾಯಿತು..!!

|| ಹರೇರಾಮ || ಗಂಗೆಗೆ ಗಂಗೆಯೆಂಬ ಹೆಸರು ಎಂದು ಬಂದಿತೋ, ಅಂದಿದ್ದ ಜಲಪ್ರವಾಹ ಇಂದಿಲ್ಲ… ಅದು ಹರಿದು ಸಮುದ್ರವನ್ನು ಸೇರಿ ಅದೆಷ್ಟೋ ಕಾಲವಾಯಿತು..! ಅಂದಿನಿಂದ ಇಂದಿನವರೆಗೆ ಗಂಗೋತ್ರಿಯಿಂದ ಗಂಗಾಸಾಗರಕ್ಕೆ ಅದೆಷ್ಟು ನೀರು ಹರಿದಿಲ್ಲ..? ಪ್ರತಿಕ್ಷಣವೂ ಹಳೆಯನೀರು ಹರಿದುಹೋಗಿ ಹೊಸನೀರು ಬರುತ್ತಿದ್ದರೂ ಗಂಗೆಯೆಂಬ ಹೆಸರು ಮಾತ್ರ ಬದಲಾಗಲೇ ಇಲ್ಲ.. ಏಕೆಂದರೆ, ಅಲ್ಲಿ ಹರಿದುಹೋದ ಹಳೆಯನೀರೂ ಗಂಗೆಯೇ, ಹರಿದು… Continue Reading →

ಸೂರ್ಯನಂಥಾ ವಂಶ..!

“ಕಾರಣಗುಣಗಳು ಕಾರ್ಯಗಳಲ್ಲಿ ಕಾಣಿಸಿಕೊಳ್ಳುವುದು ನಿಸರ್ಗ ನಿಯಮ”..
ನೂಲಿನ ಬಣ್ಣ ಬಟ್ಟೆಯಲ್ಲಿ, ಬೀಜದ ಗುಣ ವೃಕ್ಷದಲ್ಲಿ, ತಾಯಿಯ ಸ್ವಭಾವ ಮಕ್ಕಳಲ್ಲಿ ಸಂಕ್ರಮಿಸುವುದು ಲೋಕದಲ್ಲಿ ನಿತ್ಯದರ್ಶನದ ವಿಷಯ…
ಅಂತೆಯೇ ಕಾರಣಪುರುಷನಾದ ಸೂರ್ಯದೇವನ ಗುಣಗಳೆಲ್ಲವೂ ಸೂರ್ಯವಂಶದ ರಾಜರುಗಳಲ್ಲಿ ಸೂರ್ಯನಷ್ಟೇ ಸ್ಪಷ್ಟವಾಗಿ ಗೋಚರಿಸಿದವು..

ಸೂರ್ಯನು ದಿವಿಯ ಮಧ್ಯದಲ್ಲಿ ನಿಂತು ಭುವಿಯನ್ನು ಬೆಳಗಿದರೆ, ಸೂರ್ಯವಂಶೀಯರು ಭುವಿಯ ಮಧ್ಯದಲ್ಲಿ ನಿಂತು ಜೀವರಾಶಿಗಳ ಜೀವನವನ್ನೇ ಬೆಳಗಿದರು..!
ಸೂರ್ಯನು ಕತ್ತಲೆಯ ವೈರಿಯಾದರೆ..
ಸೂರ್ಯವಂಶೀಯರು ಕೆಡುಕಿನ ವೈರಿಗಳು..

ವಂಶವೆಂದರೆ ದೇವರ ದೀಪೋತ್ಸವವಿದ್ದಂತೆ..!

|| ಹರೇರಾಮ || ವಂಶವೆಂದರೆ ದೇವರ ದೀಪೋತ್ಸವವಿದ್ದಂತೆ..! ದೀಪೋತ್ಸವದಲ್ಲಿ ದೇವರ ನಂದಾದೀಪದಿಂದ ದೀಪವೊಂದನ್ನು ಹೊತ್ತಿಸಿ, ತದನಂತರ ಒಂದು ದೀಪದಿಂದ ಇನ್ನೊಂದು, ಅದರಿಂದ ಮತ್ತೊಂದು ಎಂಬಂತೆ ಸಾವಿರಾರು ದೀಪಗಳನ್ನು ಬೆಳಗುವಂತೆ, ಈಶ್ವರನಿಂದ ಆರಂಭಿಸಿ ನಮ್ಮವರೆಗೆ ಬೆಳಗಿ ಬರುವ ಚೇತನದೀಪಮಾಲಿಕೆಯೇ ಅಲ್ಲವೇ ವಂಶವೆಂದರೆ..?

ವಿಶ್ವವ್ಯವಸ್ಥೆಯ ಜೀವಸೂತ್ರವಿದು ವಿಶ್ವನಿಯಾಮಕಪೀಠ..!

‍|| ಹರೇರಾಮ ||‍ ಅದ್ಭುತಾಕಾರದ ಅಗ್ನಿಗೋಳಗಳು..! ಅನಂತ ಅಂತರಾಳಗಳು..! ಬೆಳಕ ಬೀರುವ ತಾರೆಗಳು..! ಬೆಳಕ ಹೀರುವ ಗ್ರಹಗಳು..! ಒಂದನ್ನೊಂದು ಬಿಡದಂತೆ ಹಿಡಿದಿಡುವ ಆಶ್ಚರ್ಯಕರ ಸೆಳೆತ..! ಕ್ಷಣಮಾತ್ರವೂ ನಿಲ್ಲದ ಅವಿಶ್ರಾಂತ ಗತಿ..! ಒಂದರ ಸುತ್ತ ಇನ್ನೊಂದು ಸುತ್ತುವ  ಅನಿರ್ವಚನೀಯ ಪ್ರೀತಿ..! ಮಾನವ ಮತಿಯ ಸಕಲ ಕಲ್ಪನೆಗಳಿಗೂ ಮೀರಿದ ವಿಸ್ತಾರದ ಅನಂತಕೋಟಿ ಬ್ರಹ್ಮಾಂಡ ಮಂಡಲಗಳ ಮಧ್ಯದಲ್ಲೊಂದು ಪುಟ್ಟ ಭೂಮಂಡಲ..!

ರಾಮಾಯಣ ರಾಮಾರ್ಪಣ..!

|| ಹರೇರಾಮ || ಆಹಾ ! ಎಂಥಾ ದೃಶ್ಯವದು…! ತನ್ನ ಸಾವಿರಾರು ಪ್ರಜೆಗಳನ್ನು ಕೇವಲ ಕಂಠಸಿರಿಯ ಬಲದಿಂದಲೇ ಸೆಳೆಯುವ – ಆಳುವ ಅವಳಿ ಮಕ್ಕಳು ರಾಜಮಾರ್ಗವನ್ನು ಶೋಭಾಯಮಾನಗೊಳಿಸುತ್ತಿದ್ದಾರೆ…! ಶ್ರವಣ-ನಯನ-ಮನಗಳ ಸಂಯುಕ್ತ ಹಬ್ಬವದು..! ಕಣ್ತಣಿಸುವ ರೂಪ..ಕಿವಿಗಿಂಪಾದ ಗಾನ..ಮನ ಬೆಳಗುವ ಸಾಹಿತ್ಯಗಳ ತ್ರಿವೇಣೀಸಂಗಮ… ಅಚ್ಚರಿಯ ಮೇಲಚ್ಚರಿಯಾಯಿತು ಅಯೋಧ್ಯೆಯರಸನಿಗೆ… ರೂಪ ತನ್ನದೇ..! ಸ್ವರ ತನ್ನದೇ..! ಕೊನೆಗೆ ಗಮನಿಸಿ ಕೇಳಿದರೆ ಕುಮಾರರು… Continue Reading →

ರಾಮಸಾಗರಗಾಮಿನೀ…………..

|| ಹರೇರಾಮ || ಸೋಮರಸ ಒಳಸೇರಿದರೆ ಸುಮ್ಮನಿರಗೊಡುವುದೇ…? ಈ ಲೋಕವನ್ನು ಮರೆಸಿ ಇನ್ನಾವುದೋ ಲೋಕದಲ್ಲಿ ವಿಹರಿಸುವಂತೆ ಮಾಡದೇ ಅದು…? ರಾಮರಸ ಒಳಸೇರಿದಾಗ  ಕುಶಲವರ ಸ್ಥಿತಿಯೂ ಹಾಗೆಯೇ ಆಯಿತು… ಬಿಂದುವಿನೊಳು ಸಿಂಧು ಹಿಡಿಸುವುದೇ…? ವಿಶ್ವಂಭರನ ಚರಿತೆಯ ವಿಶ್ವಕಾವ್ಯವು ಪುಟಾಣಿಮಕ್ಕಳ ಪುಟ್ಟಹೃದಯದೊಳಗೆ ಅದು ಹೇಗೆ ಹಿಡಿಸಿತೋ..? ಹಿಡಿಸಲಾರದೇ ಹೊರಹೊಮ್ಮಿ ಹುಚ್ಚು ಹೊಳೆಯಾಗಿ ಹರಿದಿರಬೇಕು…! ಕೈಯಲ್ಲಿ ತಂಬೂರಿ… ಕಣ್ತುಂಬ ರಾಮ…… Continue Reading →

ಕುಶಲವರೋ ? ಕುಶಲ ಕುಶೀಲವರೋ ?

ದ್ವಾರವನ್ನು ದಾಟದೆ ದೇವರನ್ನು ತಲುಪಲುಂಟೇ..?!
ತನ್ನನ್ನು ತಲುಪಲಾರದೇ ಬಳಲುವ ಜೀವಗಳನ್ನು ಕಂಡು ಕನಿಕರಿಸಿದ ಕರುಣಾಸಿಂಧುವು ಸರ್ವಕಾಲಗಳಲ್ಲಿಯೂ ಸರ್ವದೇಶಗಳಲ್ಲಿಯೂ ಸಂತರ ರೂಪದಲ್ಲಿ ತನ್ನ ದ್ವಾರಗಳನ್ನು ತೆರೆದಿಟ್ಟನಲ್ಲವೇ…!

ಮೊದಲು ಸಂತ..
ಮತ್ತೆ ಭಗವಂತ..!

ಆದುದರಿಂದಲೇ ಇರಬೇಕು..
ರಾಮಾಯಣದ ಪ್ರಸ್ತುತಿಯು ರಾಮನ ಮುಂದಾಗುವುದಕ್ಕೆ ಮುನ್ನ ಋಷಿಸಮೂಹದ ಸಮ್ಮುಖದಲ್ಲಿ ಆಯಿತು..

ಆಶ್ರಮದ ದಿವ್ಯಪರಿಸರವದು…

ರಾಮನ ಪ್ರತಿಬಿಂಬಗಳಲ್ಲಿ ರಾಮಾಯಣದ ಪ್ರತಿಬಿಂಬ…!

ಕುಶ-ಲವರನ್ನು ಕಣ್ದಣಿಯೆ ನೋಡಿದರು ಆದಿಕವಿಗಳು..
ಭೂಮಂಡಲಾಧೀಶ್ವರನ ಮಕ್ಕಳು ಮುನಿವೇಷದಲ್ಲಿ,ಅನಾಥರಂತೆ ಆಶ್ರಮವಾಸಿಗಳಾಗಿರುವುದನ್ನು ಕಂಡು ಕರಗಿ ಮರುಗಿತು ಅವರ ಹೃದಯ..
ಅನರ್ಘ್ಯವಾದ ಈ ಜೋಡಿಮುತ್ತುಗಳು ಆಶ್ರಮಕ್ಕಿಂತ ಅರಮನೆಯಲ್ಲಿ ಭೂಷಣವಲ್ಲವೇ..? ಎಂದು ಕೇಳಿತು ಅವರ ಮನಸ್ಸು..
ಕುಶ-ಲವರನ್ನು ಲೋಕಕ್ಕೆ ತಂದ, ಲೋಕದ ತಂದೆಯೊಡನೆ ಪುನರಪಿ ಬೆಸೆಯುವ ಬಗೆ ಯಾವುದೆಂದು ಚಿಂತಿಸತೊಡಗಿದ ಮುನಿಗಳಿಗೆ ಉತ್ತರ ರೂಪದಲ್ಲಿ ಹೊಳೆದಿದ್ದು ರಾಮಾಯಣವೇ..!

ತಾಯಿಯಿಂದ ತಂದೆಯೆಡೆಗೆ…
ಗುರುವಿನಿಂದ ಪ್ರಭುವಿನೆಡೆಗೆ..
ಆಶ್ರಮದಿಂದ ಅರಮನೆಯೆಡೆಗೆ.. ಈ ಮಕ್ಕಳನ್ನು ರಾಮಾಯಣವೇ ಕರೆದೊಯ್ಯಬಹುದಲ್ಲವೇ..?

ಮೂರು ಮೆಟ್ಟಿಲುಗಳ ಮೀರಿ ಮೆರೆವನೋ ಗುರುಮೂರುತಿ…

ಮಾನವನ ಭ್ರಮೆಗಳು ಅನಂತ..
ಅವುಗಳಲ್ಲಿ ಬಹುದೊಡ್ಡದು ‘ಪ್ರಕೃತಿಗೆ ಮಾತು ಬಾರದು’ ಎಂದುಕೊಳ್ಳುವುದು..

ಆದರೆ, ಪ್ರಕೃತಿ ಎ೦ದೂ ಮೂಕವಲ್ಲ..
ಯಾವಾಗಲೂ, ಎಲ್ಲೆಲ್ಲೂ, ಪ್ರಕೃತಿಯು ಆಡುತ್ತಲೇ ಇರುವ ಮಾತುಗಳನ್ನು ಕೇಳಿಸಿಕೊಳ್ಳದ ನಾವೇ ಕಿವುಡರು..!
ನಮ್ಮೊಳಗಿನ ಕೊರತೆಯನ್ನು ಪ್ರಕೃತಿಯಲ್ಲಿ ಕಾಣುವ ಕುದೃಷ್ಟಿ ನಮ್ಮದು..
‘ವಿಶ್ವ’ವನ್ನೇ ‘ಶತ್ರು’ವೆಂದು ಕಲ್ಪಿಸಿಕೊಂಡು ಎಲ್ಲರ ಮೇಲೂ ದಂಡೆತ್ತಿ ಹೋದ ರಾಜಾ ಕೌಶಿಕನು – ಜೈತ್ರಯಾತ್ರೆಯಲ್ಲಿ ಮುಂದುವರೆಯುತ್ತಾ…ಮುಂದುವರೆಯುತ್ತಾ ಋಷ್ಯಾಶ್ರಮದ ದಿವ್ಯಸ್ಥಳವೊಂದನ್ನು ಪ್ರವೇಶಿಸಿದಾಗ,
ಆತನ ಅಂತರಾತ್ಮದ ಅನುಭವಕ್ಕೆ ಬಂದಿತು ಈ ಸತ್ಯ..

ಕಾವ್ಯ ಕನ್ನಿಕೆಗಾಗಿ ವರಕಂಠದ ಅನ್ವೇಷಣೆ..!

ಬದುಕಿನ ಸಕಲ ಸಂಗತಿಗಳೂ ಮೊದಲು ಅಂತರಂಗದಲ್ಲಿ ನಿರ್ಮಾಣವಾಗುತ್ತವೆ..
ಆಮೇಲೆ ಬಹಿರಂಗದಲ್ಲಿ ಆಕಾರ ತಾಳಿ ಪ್ರಕಟಗೊಳ್ಳುತ್ತವೆ..
ಎಲ್ಲೆಡೆ ಎದ್ದು ಕಾಣುವ ತಥ್ಯವಿದು..

ಮನದಲ್ಲಿ ಮೊದಲು ಮೂಡಿದ ಭಾವಗಳಲ್ಲವೇ ಮತ್ತೆ ಮುಖದಲ್ಲಿ ಮಾತಾಗಿ ವ್ಯಕ್ತವಾಗುವುದು..!?
ಮಹಾಮಾನವರ ಮಸ್ತಿಷ್ಕದ ಮನೆಯಲ್ಲಿ ಮೂಡಿಬರುವ ಯೋಜನೆಗಳಲ್ಲವೆ,

ಮಹತ್ಕೃತಿಗಳಾಗಿ ಈ ಜಗದಲ್ಲಿ ತೋರಿ ಬರುವುದು..!?
ಕದನಗಳು ಮೊದಲಾಗುವುದು ಮನಸಿನಲ್ಲಿ ..
ಪತನಗಳು ಮೊದಲಾಗುವುದು ಮನಸಿನಲ್ಲಿ..

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑