ಹರೇ ರಾಮ………. ನಮಗೆ ಗುರುಗಳಿದ್ದಾರೆ, ನಮಗೆ ಗುರುಮಠವಿದೆ ಎಂಬ ಮಾತನ್ನು ಎಳೆವೆಯಲ್ಲಿದ್ದಾಗಲೇ ನನಗೆ ಕೇಳಿಸಿಕೊಂಡ ನೆನಪಿದೆ. ನನ್ನ ತವರು ಮನೆಯವರು ಗ್ರಾಮ ಗುರಿಕ್ಕಾರರ ಜವಾಬ್ದಾರಿಯುಳ್ಳವರಾಗಿದ್ದರು. ಅವರು ವರ್ಷಕ್ಕೊಂದು ಬಾರಿ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರಾಜೆಯ ಮಾಣಿ ಮಠಕ್ಕೆ ಹೋಗಿ ಬರುತ್ತಿದ್ದರು. ಈ ನೆಪದಲ್ಲಿ ಒಂದೆರಡು ಸಾರಿ ನಾನು ಮಾಣಿ ಮಠಕ್ಕೆ ಹಿರಿಯರ ಸಂಗಡ ಹೋಗಿದ್ದೆ…. Continue Reading →
ಯಾವ ಮಹಾಮಹಿಮನ ಕೃಪೆಯು ನನ್ನ ಬದುಕಿನ ಎಲ್ಲ ಅಂಗಗಳಲ್ಲಿ ವ್ಯಾಪಿಸಿದೆಯೋ, ಯಾವ ಮಮತಾಮಯಿಯ ಕರುಣೆಯು ವಿಧಿಯಾಟದ ಸುಳಿಯಲ್ಲಿ ಕಳೆದು ಹೋಗುತ್ತಿದ್ದ ಬದುಕನ್ನು ಮೇಲೆತ್ತಿ, ಉದಾತ್ತವಾದುದನ್ನು ಕಿಂಚಿತ್ತಾದರೂ ಅರ್ಥೈಸಿಕೊಳ್ಳಲು ನನ್ನನ್ನು ಪ್ರೇರಿಸಿದೆಯೋ,ಅಂತಹ ಮಹಾತ್ಮನ ಕುರಿತಾಗಿ ನನ್ನ ಕೆಲವು ಭಾವನೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಬಯಸುತ್ತಿದ್ದೇನೆ. ಕುರುಡನು ಆನೆಯ ಬಗ್ಗೆ ವರ್ಣಿಸ ಹೊರಟಂತೆ ನಾನೆಷ್ಟೇ ಹೇಳಿದರೂ ಅದು ಆ ವಿರಾಟ್ ವ್ಯಕ್ತಿತ್ವದ ಕಿಂಚಿನ್ಮಾತ್ರವನ್ನೂ ಹೇಳಿದಂತಾಗದೆಂದು ನನಗೆ… Continue Reading →
ಕೋಕಾ-ಕೋಲ ಕಂಪೆನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯ ಒಂದು ಪುಟ್ಟ ಅರ್ಥಪೂರ್ಣ ಭಾಷಣ ಬದುಕನ್ನು ಒಂದು ಚೆಂಡಾಟವೆಂದು ಭಾವಿಸೋಣ. ನಿಮ್ಮ ಬಳಿ ಕೆಲಸ, ಕುಟುಂಬ, ಆರೋಗ್ಯ, ಗೆಳೆಯರು ಮತ್ತು ಉತ್ಸಾಹ ಎಂಬ ೫ ಚೆಂಡುಗಳಿವೆ. ಈ ಎಲ್ಲಾ ಚಂಡುಗಳನ್ನು ಗಾಳಿಯಲ್ಲಿಯೇ ಹಾರಿಸುತ್ತ ಕೆಳಬೀಳದಂತೆ ಆಡುವುದೇ ಬದುಕು. ಈ ಆಟದಲ್ಲಿ ನೀವು ಅರ್ಥಮಾಡಿಕೊಳ್ಳಬೇಕಾದ ಸಂಗತಿ ಎಂದರೆ ಕೆಲಸ ಎಂಬುದು ಒಂದು ರಬ್ಬರ್ರಿನ ಚೆಂಡು… Continue Reading →
ನಮ್ಮ ತಂದೆಯವರು ತುಂಬಾ ಬಡತನದಿಂದ ಜೀವನ ಸಾಗಿಸುತ್ತಿದ್ದರು. ಅಮ್ಮನ ಅಕ್ಕನ ಗಂಡ ಆಗಿರುವ ದಿ. ಬಲೇಗಲ್ಲ್ ಚಿದಂಬರಯ್ಯನವರು ನಮ್ಮ ತಂದೆಯವರನ್ನು ಶ್ರೀಮಠದ ಅಂದಿನ ವ್ಯವಸ್ಥಾಪಕರಾದ ಶ್ರೀ ಎ. ಎಸ್. ರಾಮಪ್ಪನವರ ಮುಖಾಂತರ ಜಗದ್ಗುರು ಶಂಕಾರಾಚಾರ್ಯ ಶ್ರೀಮದ್ ರಾಘವೇಂದ್ರಭಾರತೀ ಮಹಾಸ್ವಾಮಿಗಳ ಅಪ್ಪಣೆ ಪಡೆದು ಶ್ರೀರಾಮಚಂದ್ರಾಪುರಮಠಕ್ಕೆ ಕರೆತಂದು ಬಿಟ್ಟರು. ತೀರ್ಥರೂಪರು ಹೊಸನಗರದ ಶ್ರೀರಾಮಚಂದ್ರಾಪುರಮಠದಲ್ಲಿ 1981 ರಿಂದ 1997 ಮೇ… Continue Reading →
ಓಂ ಶ್ರೀ ಗುರುಭ್ಯೋ ನಮಃ ಹರಿಃ ಓಂ. ಶ್ರೀ ಮಹಾ ಗಣಪತಿಯು ಕೋಟಿ ಸೂರ್ಯರ ಪ್ರಭೆ ಹೊಂದಿದ್ದಾನಂತೆ. ೧೨ ಜನ ಸೂರ್ಯರಲ್ಲಿ ತಾನು ವಿಷ್ಣು ಎಂದು ಶ್ರೀಮನ್ನಾರಾಯಣನೇ ಹೇಳಿಕೊಂಡಿದ್ದಾನೆ. ವಿಶ್ವಾದಿ ಮೂಲನಾದ ಆ ಮಾಯಾಲೋಲ ವಿಷ್ಣು ಎಂಬ ವಿಚಿತ್ರಕೆ ನಮಿಸಲು ಡಿ.ವಿ. ಗುಂಡಪ್ಪನವರ ಆದೇಶ. ಸೂರ್ಯನನ್ನು ಬಚ್ಚಿಡವುದಕ್ಕಾಗಲೀ, ಮುಚ್ಚಿಡುವುದಕ್ಕಾಗಲೀ ಅಥವಾ ಯಾವುದೇ ರೀತಿಯಿಂದ ಮರೆ ಮಾಚುವುದಕ್ಕಾಗಲೀ… Continue Reading →