ಶ್ರೀರಾಮನ ನಂತರದ ಸೂರ್ಯವಂಶದ ಭವಿಷ್ಯದ ಕುರಿತು ಬಂದಿರುವ ಹಲವಾರು ಪ್ರಶ್ನೆಗಳಿಗೆ ಶ್ರೀ ಭಾಗವತದಲ್ಲಿ ಕಂಡುಬರುವ ಉತ್ತರವಿದು..
• ಪ್ರಭು ಶ್ರೀರಾಮಚಂದ್ರನಿಗೆ ಲವ-ಕುಶರೀರ್ವರು ಮಕ್ಕಳು..
• ಭರತನಿಗೆ ತಕ್ಷ-ಪುಷ್ಕಲರು..
• ಲಕ್ಷ್ಮಣನಿಗೆ ಅಂಗದ-ಚಂದ್ರಕೇತುಗಳು..
• ಶತ್ರುಘ್ನನಿಗೆ ಸುಬಾಹು-ಶತ್ರುಪಾತಿಗಳು..
• ಇವರಲ್ಲಿ ಹಿರಿಯವನಾದ ಕುಶನು ಕುಮುದ್ವತಿಯನ್ನು ವರಿಸಿ ಕುಶಾವತಿ ಅಥವಾ ಕುಶಸ್ಥಲಿಯಲ್ಲಿ ರಾಜ್ಯವಾಳುತ್ತಾನೆ..
• ಲವನು ಶ್ರಾವಸ್ತಿ ಅಥವಾ ಲವಸ್ಥಲಿಯಲ್ಲಿ, ತಕ್ಷನು ತಕ್ಷಶಿಲೆಯಲ್ಲಿ, ಪುಷ್ಕಲನು ಪುಷ್ಕಲಾವತದಲ್ಲಿ, ಅಂಗದನು ಕಾರುಪಥದಲ್ಲಿ,ಚಂದ್ರಕೇತುವು ಚಂದ್ರಕಾಂತದಲ್ಲಿ, ಸುಬಾಹು ಮಧುರಾನಗರಿಯಲ್ಲಿ, ಶತ್ರುಪಾತಿಯು ವಿದಿಶಾನಗರಿಯಲ್ಲಿ ರಾಜ್ಯವಾಳಿದರು..
ಇಂದು ಆರಾಧನೆ.. ಆದಿಶಂಕರಾಚಾರ್ಯರ ಏಕಮಾತ್ರ ಅವಿಛ್ಛಿನ್ನ ಪರಂಪರೆಯ ಮೂವತ್ತೈದನೆಯ ಧರ್ಮಾಚಾರ್ಯರೂ, ನಮ್ಮ ಪೂರ್ವಾಚಾರ್ಯರೂ ಆದ ಬ್ರಹ್ಮಲೀನ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮಿಗಳವರು ಇಹದ ಬದುಕನ್ನು ಪೂರ್ಣಗೊಳಿಸಿದ ಅಮೃತ ತಿಥಿಯಿಂದು.. ನಮ್ಮೆಲ್ಲರ ಶ್ರೇಯಸ್ಸಿಗಾಗಿ ಗುರುಗಳ ಆರಾಧನೆ ಗೋಕರ್ಣದ ಅಶೋಕೆಯಲ್ಲಿ ಸಂಪನ್ನಗೊಳ್ಳುತ್ತಿರುವ ಈ ಶುಭ ಸಮಯದಲ್ಲಿ ನಿಮ್ಮೆಲ್ಲರಿಗೂ ತೀರದ ಗುರುಕರುಣೆಯನ್ನು ಹಾರೈಸುವೆವು..
Here’s a story of an elephant and a fly .. maybe some of us wud hv heard this before .. There was a fly which was sitting on an elephant’s leg and for some reason it was angry on the… Continue Reading →