Category ಸುದ್ದಿ

Get tuned to the latest news related to Sri Swamiji

ಪ್ರತಿಯೋರ್ವರಲ್ಲಿಯೂ ದಿವ್ಯತೆಯಿದೆ- ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ರಾಘವೇಶ್ವರ ಭಾರತೀ ಮಹಾಸ್ವಾಮಿಗಳು.

ಗೋಕರ್ಣ: ತಮ್ಮ ಸತತ ಸಾಧನೆಯಿಂದ ದಿವ್ಯತೆಯನ್ನು ಪಡೆದು ವೈಕುಂಠ ಲೋಕವನ್ನು ಪ್ರವೇಶಿಸಿದರೂ ಎಲ್ಲಿಯೋ ಸ್ವಲ್ಪ ಉಳಿದಿದ್ದ ಅಥವಾ ಗಳಿಸಿದ್ದ ದೋಷದ ಪರಿಣಾಮವಾಗಿ ಜಯವಿಜಯರು ಶಾಪಗ್ರಸ್ತರಾಗಿ ಧರೆಗುರುಳಿದರು. ಅಲ್ಲಿಯೂ ಅವರು ಪರಮಾತ್ಮನ ಮಿತ್ರತೆಯನ್ನು ಕೇಳದೆ ಶತ್ರುತ್ವವನ್ನೇ ಪ್ರಾರ್ಥಿಸಿದರು. ರಾವಣ, ಕುಂಭಕರ್ಣರಾಗಿ ಜನಿಸಿ ತಪಸ್ಸನ್ನಾಚರಿಸಿ ವರ ಪಡೆದರೂ ಅಲ್ಲಿಯೂ ಅವರ ರಾಜಸ ಹಾಗೂ ತಾಮಸೀ ಪ್ರವೃತ್ತಿ ದೂರಾಗಲಿಲ್ಲ. ಬದುಕಿನುದ್ದಕ್ಕೂ… Continue Reading →

ಬದುಕು ಭಗವಂತನ ಅನುಗ್ರಹ- ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ರಾಘವೇಶ್ವರ ಭಾರತೀ ಮಹಾಸ್ವಾಮಿಗಳು.

ಗೋಕರ್ಣ: ನಾವು ಬದುಕಿನಲ್ಲಿ ಬೇಡಿದ್ದನ್ನೆಲ್ಲ ಭಗವಂತ ನೀಡುವುದಿಲ್ಲ. ಪರಮಾತ್ಮ ವಾತ್ಸಲ್ಯಮಯಿಯಾದ ತಾಯಿಯಂತೆ. ನಮ್ಮ ಒಳಿತನ್ನು ನಮಗಿಂತಲೂ ಚೆನ್ನಾಗಿ ಬಲ್ಲವನಾತ. ಆದ್ದರಿಂದಲೇ ನಮಗೆ ನಾವು ಕೇಳಿದೆವೆಂದು ಪ್ರಿಯವಾದುದನ್ನು ನೀಡದೆ ಹಿತವಾದುದನ್ನೇ ಕೊಡುತ್ತಾನೆ. ಹೀಗೆ ಪರಮಾತ್ಮನ ಪ್ರಸಾದರೂಪವಾದ ಜೀವನದಲ್ಲಿ ನಮಗೆ ಸಿಕ್ಕಿದ್ದಷ್ಟಕ್ಕೇ ತೃಪ್ತರಾದರೆ ನಮ್ಮ ಬದುಕು ಆನಂದಮಯವಾಗುತ್ತದೆಯೆಂದು ಪೂಜ್ಯ ಶ್ರೀ ಶ್ರೀಮದ್ರಾಘವೇಶ್ವರ ಭಾರತೀ ಶ್ರೀಗಳು ಹೇಳಿದ್ದಾರೆ. ಇಂದು ಅಶೋಕೆಯಲ್ಲಿ… Continue Reading →

ಸಂಪತ್ತಿನ ಪ್ರತಿರೂಪವೇ ಗೋವು – ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ರಾಘವೇಶ್ವರ ಭಾರತೀ ಮಹಾಸ್ವಾಮಿಗಳು.

ಗೋಕರ್ಣ: ದನವೇ ಧನವಾಗಿದ್ದ ಕಾಲವೊಂದಿತ್ತು. ಗೋವುಗಳ ಮೂಲಕವೇ ವ್ಯಕ್ತಿಯೋರ್ವನ ಆರ್ಥಿಕಸ್ಥಿತಿಯನ್ನು ಅಳೆಯುವ ಕಾಲವೂ ಇತ್ತು. ಆದರೆ ಭಾರತೀಯರಾದ ನಾವು ವಿಶ್ವಜನನಿಯಾದ ಗೋಮಾತೆಯನ್ನು ಮರೆತಿದ್ದೇವೆ. ನಮ್ಮ ಬದುಕಿನಲ್ಲಿ ಹೆತ್ತ ತಾಯಿಯಷ್ಟೇ ಶ್ರೇಷ್ಠಸ್ಥಾನವನ್ನು ಹೊಂದಿದ ಗೋವಿಗೆ ನಮ್ಮ ಸೇವೆಯನ್ನು ಸಲ್ಲಿಸುವುದು ಮಕ್ಕಳಾದ ನಮ್ಮ ಕರ್ತವ್ಯವಾಗಿದೆಯೆಂದು ಪೂಜ್ಯ ಶ್ರೀ ಶ್ರೀಮದ್ರಾಘವೇಶ್ವರ ಭಾರತೀ ಶ್ರೀಗಳು ಹೇಳಿದ್ದಾರೆ. ಚಾತುರ್ಮಾಸ್ಯದ ನಿಮಿತ್ತ ಇಂದು ಅಶೋಕೆಯಲ್ಲಿ… Continue Reading →

ಬದುಕಿಗೆ ಧಾರ್ಮಿಕ ಕಟ್ಟುಪಾಡು ಅಗತ್ಯ – ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ರಾಘವೇಶ್ವರ ಭಾರತೀ ಮಹಾಸ್ವಾಮಿಗಳು.

ಗೋಕರ್ಣ: ಮಾನವರಾದ ನಮಗೆ ಹುಟ್ಟು, ಸಾವುಗಳು ತಪ್ಪಿದ್ದಲ್ಲ. ನಿರಂತರವಾಗಿ ಒಂದಾದ ನಂತರ ಮತ್ತೊಂದು ಸಾಗರದ ಅಲೆಗಳಂತೆ ಬಂದೆರಗುತ್ತಲೇ ಇರುತ್ತದೆ. ಸಾವಿನಷ್ಟೇ ಹುಟ್ಟೂ ಸಹ ದುಃಖಕರ. ಶ್ರೀಮದಾಚಾರ್ಯ ಶಂಕರ ಭಗವತ್ಪಾದರೂ ಕೂಡಾ  ಪುನರಪಿ ಜನನಂ ಪುನರಪಿ ಮರಣಂ ಎಂಬ ಮಾತಿನ ಮೂಲಕ ಸತ್ಯವನ್ನು ಹೇಳಿ  ನಮ್ಮನ್ನು ಎಚ್ಚರಿಸುತ್ತಾರೆ. ಜೀವನದ ಅಸ್ಥಿರತೆಯ ಅರಿವಿದ್ದರೆ ಮಾತ್ರ ಸ್ವಲ್ಪಮಟ್ಟಿಗಿನ ನೆಮ್ಮದಿಯನ್ನು ಕಾಣಬಹುದು…. Continue Reading →

ಬದುಕಿಗೆ ಬೆಳಕು ಗುರುವಿನಿಂದ – ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ರಾಘವೇಶ್ವರ ಭಾರತೀ ಮಹಾಸ್ವಾಮಿಗಳು

ಗೋಕರ್ಣ: ನಮ್ಮ ಬದುಕಿನ ಮಾರ್ಗದರ್ಶನಕ್ಕೆ ಗುರು ಬೇಕು. ಗುರು ಎಂದರೆ ಕೇವಲ ವ್ಯಕ್ತಿಯಲ್ಲ. ಅದೊಂದು ತತ್ವ. ಶಿಷ್ಯಸಮುದಾಯವು ಪರಂಪರೆಯಿಂದ ಗುರುವನ್ನು ಆರಾಧಿಸುತ್ತ ಜೀವನದ ಸಾರ್ಥಕತೆಗೆ ಗುರುವನ್ನು ಅವಲಂಬಿಸಿದಂತೆ ಸ್ವತಃ ಗುರುವೂ ತನ್ನ ಗುರುಪರಂಪರೆಯನ್ನು ಅರ್ಚಿಸುತ್ತಾನೆ. ಆದಿಗುರುವಿನಲ್ಲಿ  ಈ ಪಂಕ್ತಿ ಕೊನೆಗೊಳ್ಳುತ್ತದೆ. ಕೋಣೆಯಲ್ಲಿ ಎಷ್ಟೋ ವಸ್ತುಗಳು ತುಂಬಿರುತ್ತವೆ. ಅದರಲ್ಲಿ ಅತ್ಯಮೂಲ್ಯವಾದ ಪದಾರ್ಥಗಳೂ ಇರಬಹುದು. ಆದರೆ ಅದರ ಸಮ್ಯಗ್ದರ್ಶನಕ್ಕೆ… Continue Reading →

ಅಶೋಕೆಯಿಂದ ಶೋಕವು ದೂರ – ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು

ಗೋಕರ್ಣ : ಗೋಕರ್ಣದ ಸಮೀಪದ ಅಶೋಕೆಯಲ್ಲಿ ಶ್ರೀಮದಾಚಾರ್ಯ ಶಂಕರ ಭಗವತ್ಪಾದರಿಂದ ಸಂಸ್ಥಾಪಿತವಾಗಿ ಶ್ರೀ ವಿದ್ಯಾನಂದಾಚಾರ್ಯರಿಂದ ಪ್ರವರ್ತಿತವಾದ ನಮ್ಮ ಈ ಅವಿಚ್ಛಿನ್ನ ರಾಜಗುರುಪರಂಪರೆಯ ಶ್ರೀಮಠದ ಆರಾಧ್ಯದೈವನಾದ ಪ್ರಭು ಶ್ರೀರಾಮಚಂದ್ರ ಈ ಪೀಠದ ಹನ್ನೆರಡನೆಯ ಧರ್ಮಾಚಾರ್ಯರಾದ ಶ್ರೀರಾಮಚಂದ್ರ ಭಾರತೀ ಶ್ರೀಗಳವರ ಕಾಲದಲ್ಲಿ ಇಲ್ಲಿಂದ ಹೊಸನಗರದ ಅಗಸ್ತ್ಯಾಶ್ರಮ ಪರಿಸರಕ್ಕೆ ಹೋಗಿ ಅಲ್ಲಿ ನೆಲೆನಿಂತ. ಅದೂ ಶ್ರೀರಾಮನ ಶರದಿಂದಲೇ ಜನ್ಮ ತಳೆದು ಶರಾವತೀ… Continue Reading →

ಗುರುಶಿಷ್ಯರು ಸೂರ್ಯ ಚಂದ್ರರಂತೆ – ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು

ಗೋಕರ್ಣ: ಅಮಾವಾಸ್ಯೆಯಂದು ಸೂರ್ಯಚಂದ್ರರ ಸಂಗಮವಾಗುತ್ತದೆ. ಅಂದು ಚಂದ್ರನು ಸೂರ್ಯನಿಂದ ತಾನು ಬೆಳಗಲು ಅಗತ್ಯವಾದ ಪ್ರಕಾಶವನ್ನು ಪಡೆಯುತ್ತಾನೆ. ಇಲ್ಲಿ ಸೂರ್ಯ ಪರಮಾತ್ಮನ ಸಂಕೇತವಾದರೆ ಚಂದ್ರ ಜೀವರ ಪ್ರತೀಕ. ಚಂದ್ರನನ್ನು ನಮ್ಮ ಪ್ರಾಚೀನರು ಮನಃಕಾರಕ ಎಂದೇ ಗುರುತಿಸಿದ್ದಾರೆ. ಸೂರ್ಯನೆಂದರೆ ಪೂರ್ಣಪ್ರಭೆ. ಲೋಕಕ್ಕೆ ಅಗತ್ಯವಾದ ಬಲವನ್ನು ನೀಡುವ ಶಕ್ತಿಕೇಂದ್ರ. ಜೀವ ಪರಮಾತ್ಮನ ಬಳಿ ಹೋಗಿ ಶರಣಾಗಿ ಅಲ್ಲಿಂದ ಬದುಕಿನ ಸಾಮರ್ಥ್ಯವನ್ನು… Continue Reading →

ಅಪೂರ್ವ ಸಿದ್ಧಿ ಕ್ಷೇತ್ರ ಗೋಕರ್ಣ – ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು

ಗೋಕರ್ಣ: ರಾಜಾ ಭಗೀರಥ. ಪ್ರಹ್ಲಾದ ಮೊದಲಾದ ರಾಜರ್ಷಿಗಳ, ವ್ಯಾಸ ವಸಿಷ್ಠ ಮೊದಲಾದ ಮಹರ್ಷಿಗಳ ತಪೋಭೂಮಿಯಾಗಿದ್ದ ಸಿದ್ಧಿಕ್ಷೇತ್ರವಾದ ಗೋಕರ್ಣವು ಲೋಕಶಂಕರನಾದ ಶಿವನಿಗೂ ತಪಃಸ್ಥಳವಾಗಿತ್ತು. ಯುಗ, ಯುಗಗಳ ಪೂರ್ವದಲ್ಲಿ ಪರಶಿವನೂ ಸೃಷ್ಟಿಕಾರ್ಯವನ್ನುಕೈಗೊಳ್ಳಲು ತಪಸ್ಸನ್ನಾಚರಿಸಿದ ಪುಣ್ಯಭೂಮಿಯಾದ ಈ ಕ್ಷೇತ್ರ ಶ್ರೀರಾಮನ, ಆಂಜನೇಯನ ಜನನಕ್ಕೆ ಕಾರಣವಾದ ಪ್ರದೇಶವೂ ಹೌದು. ಇಂದು ಸಾರ್ವಭೌಮ ಮಹಾಬಲೇಶ್ವರನ ಆತ್ಮಲಿಂಗದಿಂದ ಭೂಷಿತವಾಗಿದ್ದರೂ ಅದಕ್ಕಿಂತ ಮೊದಲು ಇಲ್ಲಿ ಆರಾಧ್ಯನಾಗಿದ್ದವ… Continue Reading →

ಜೀವನ ನದಿಗೆ ಸೀತಾರಾಮರೇ ದಡಗಳು – ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು

ಗೋಕರ್ಣ: ಈ ನಮ್ಮ ಜೀವನ ಒಂದು ನದಿಯಂತೆ. ಅದರ ಎರಡು ದಡಗಳೇ ಸೀತಾರಾಮಚಂದ್ರರು, ಪ್ರವಾಹದಲ್ಲಿ ಕೊಚ್ಚಿಹೋಗದಂತೆ, ಮುಳುಗದಂತೆ ನಮ್ಮನ್ನು ರಕ್ಷಿಸುವವರು. ಈ ಎರಡು ದಡಗಳಲ್ಲಿ ಯಾವುದನ್ನು ಆಶ್ರಯಿಸಿದರೂ ನಾವು ಸುರಕ್ಷಿತವಾಗಿ ನಮ್ಮ ಬಾಳಿನ ನೌಕೆಯನ್ನು ಗುರಿಯತ್ತ ಸಾಗಿಸಬಹುದು ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಶ್ರೀಗಳವರು ಅಭಿಪ್ರಾಯಪಟ್ಟರು. ಇಂದು ಸಮೀಪದ ಅಶೋಕೆಯಲ್ಲಿ ಚಾತುರ್ಮಾಸ್ಯದ ನಿಮಿತ್ತ ಆಯೋಜಿತವಾದ ರಾಮಕಥಾದಲ್ಲಿ… Continue Reading →

ಉತ್ಪಾತಗಳು ಮುಂಬರುವ ವಿಪತ್ತುಗಳಿಗೆ ಸೂಚಕ- ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು

ಗೋಕರ್ಣ: ಮಾತೃತ್ವ ಎಂದರೇ ವಾತ್ಸಲ್ಯದ ಇನ್ನೊಂದು ಹೆಸರು. ನಮ್ಮ ಮೇಲಿನ ಪೃಕೃತಿಮಾತೆಯು ಅನುಗ್ರಹ ಅಪಾರ.ಸುಖವಾಗಿ ಬದುಕಲು ಬೇಕಾದ ಸಕಲ ವಸ್ತುಗಳನ್ನೂ ಈ ತಾಯಿ ನಮಗೆ ನೀಡುತ್ತಾಳೆ.ನಮಗೆ ಬರಬಹುದಾದ ವಿಪತ್ತನ್ನೂ ಆಕೆ ಮೊದಲೇ ಸೂಚಿಸುತ್ತಾಳೆ. ತಾಯಿಯ ಭಾಷೆಯು ಅರ್ಥವಾಗುವವರು ಅದನ್ನು ತಿಳಿದುಕೊಳ್ಳಬಲ್ಲರು. ರಾವಣ, ಕುಂಭಕರ್ಣರು ಹುಟ್ಟುವಾಗ ಅಸಹಜವಾದ ಅನೇಕ ಉತ್ಪಾತಗಳು ಕಾಣಿಸಿಕೊಂಡವೆಂದು ಮಹರ್ಷಿ ವಾಲ್ಮೀಕಿ ಉಲ್ಲೇಖಿಸುತ್ತಾರೆ. ಅವರ… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑