“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 24:ಆಸೆಗೆ ಮುಪ್ಪಿಲ್ಲ ಆಕೆ ಹಣ್ಣು ಹಣ್ಣು ಮುದುಕಿ. ತನ್ನವರೆಂಬುವವರು ಯಾರೂ ಇಲ್ಲದ ಅನಾಥೆ. ಹೊಟ್ಟೆಪಾಡಿಗಾಗಿ ಕಾಡಿಗೆ ಹೋಗಿ ಕಟ್ಟಿಗೆ ಸಂಗ್ರಹಿಸಿ ಮಾರಿ ಜೀವಿಕೆ… Continue Reading →
ಗೋಕರ್ಣ.ಮಾ 10. ವ್ಯಕ್ತಿಯೋರ್ವನಿಗೆ ಮಹತ್ವ ಸಿಗುವುದು, ಆತ ಸಾಮಾಜಿಕವಾಗಿ ಪ್ರಸ್ತುತನಾಗುವುದು ಕೇವಲ ಶರೀರದಾಧಿಕ್ಯದಿಂದಲೋ, ಸಂಪತ್ತಿನಿಂದಲೋ ಅಲ್ಲ. ತನ್ನ ಸತತಪ್ರಯತ್ನದಿಂದ ಸಮಾಜದ ಜನರಿಗೆ ಹೆಚ್ಚುಸಂತೋಷವನ್ನು ಕೊಡುವವನೇ ನಿಜವಾದ ಅರ್ಥದಲ್ಲಿ ದೊಡ್ಡವ್ಯಕ್ತಿ ಯಾರು ತನ್ನ ಸ್ವಾರ್ಥಕ್ಕಾಗಿ ತನ್ನವರ ಸಂತೋಷವನ್ನು ಕಿತ್ತುಕೊಳ್ಳುತ್ತಾನೋ ಅವನಂತಹ ಅಲ್ಪಜೀವಿ ಬೇರೊಂದಿಲ್ಲ ಎಂದು ಪರಮಪೂಜ್ಯ ಶ್ರೀ ಶ್ರೀಮದ್ರಾಘವೇಶ್ವರ ಭಾರತೀ ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ. ಇಂದು ಮಹಾಶಿವರಾತ್ರಿಯ ವಿಶೇಷಪರ್ವದಲ್ಲಿ… Continue Reading →
ಗೋಕರ್ಣ.ಮಾ೯. ಪತಿಯಾದ ಮಹರ್ಷಿಗೌತಮರ ಶಾಪಕ್ಕೊಳಗಾಗಿ ಯಾರಕಣ್ಣಿಗೂ ಬೀಳದೆ ಅದೃಶ್ಯವಾಗಿದ್ದ ಅಹಲ್ಯೆಯನ್ನು ಉದ್ಧರಿಸಿ ಮಹಾತಪಸ್ವಿನಿಯಾದ ಆಕೆಯ ಪಾದವನ್ನು ಸ್ಪರ್ಶಿಸುವ ಮೂಲಕ ಆಕೆ ಪರಮಪವಿತ್ರಳಾದವಳು, ಕಳಂಕಿತಳಲ್ಲ ಎಂಬುದನ್ನು ಲೋಕಕ್ಕೆ ತೋರಿಸಿದವನು ಪ್ರಭುಶ್ರೀರಾಮಚಂದ್ರ.ಅರಿತೋ ಅರಿಯದೆಯೋ ಬದುಕಿನಲ್ಲಿ ಪಾಪಗಳು ಘಟಿಸುವುದು ಸಹಜ. ಆದರೆ ಪಾಪವು ಪಶ್ಚಾತ್ತಾಪದಿಂದ ತಪಸ್ಸಿನಿಂದ ದೂರಾಗುತ್ತದೆ. ಆದ್ದರಿಂದ ಪಾಪವನ್ನು ದೂರಮಾಡಬೇಕೇ ಹೊರತು ಪಾಪಿಯನ್ನಲ್ಲ ಎಂಬ ಸಂದೇಶ ಈ ಪ್ರಕರಣದಲ್ಲಿ… Continue Reading →
“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 23: ತಪ್ಪು ಮಾಡಿದವರಾರು? ಯಮಧರ್ಮರಾಯನ ಆಸ್ಥಾನದಲ್ಲಿ ಗೋಹತ್ಯೆ ಮಾಡಿ ಸತ್ತ ಬ್ರಾಹ್ಮಣನೊಬ್ಬನ ವಿಚಾರಣೆ ನಡೆಯುತ್ತಿತ್ತು. ಯಮಧರ್ಮ ಬ್ರಾಹ್ಮಣನನ್ನು ಪ್ರಶ್ನಿಸಿದ – ” ರೌರವನರಕದಲ್ಲಿ… Continue Reading →
ಗೋಕರ್ಣ.ಮಾ೮. ಎಲ್ಲರನ್ನೂ ತನ್ನ ಸುತ್ತಮುತ್ತಲಿನದೆಲ್ಲವನ್ನೂ ಪ್ರೀತಿಯಿಂದ, ವಿಶ್ವಾಸದಿಂದ ನೋಡಿ ಆ ಎಲ್ಲದರ ಜೊತೆ ಆತ್ಮೀಯವಾದ ಸಂಬಂಧವನ್ನು ಬೆಳೆಸಿಕೊಳ್ಳಬೇಕು. ಆಗ ಅಷ್ಟೂ ಜೀವಗಳ ಪ್ರೀತಿ, ವಾತ್ಸಲ್ಯ ನಮ್ಮದಾಗುತ್ತದೆ. ಆ ಪ್ರೀತಿಯನ್ನು ನಮ್ಮ ಕುಟುಂಬಕ್ಕೆ ಮಾತ್ರ ಸೀಮಿತಗೊಳಿಸಿಕೊಂಡರೆ ಸೀಮಿತವಾದ ಸುಖ ಮಾತ್ರ ದೊರೆಯಬಹುದು. ಮಹಾತ್ಮರು ಲೋಕವನ್ನೇ ತಮ್ಮದಾಗಿಸಿಕೊಳ್ಳುವ ಮೂಲಕ ಆತ್ಮವಿಸ್ತರಣೆಯ ಮಾರ್ಗವನ್ನು ಅನುಸರಿಸುತ್ತಾರೆ. ಪ್ರಭು ಶ್ರೀರಾಮಚಂದ್ರನ ಮಾರ್ಗವದು. ಆತ… Continue Reading →
ಗೋಕರ್ಣ.ಮಾ೭. ವ್ಯಕ್ತಿಯಿಂದ ರೂಪುಗೊಂಡದ್ದು ಸಮಾಜ.ಅದರ ಘಟಕವಾದ ವ್ಯಕ್ತಿಯ ಸ್ವಭಾವವೇ ಸಮುದಾಯದಲ್ಲಿ ಪ್ರತಿಫಲಿಸುತ್ತದೆ. ವ್ಯಕ್ತಿಯ ಆಂತರ್ಯ ಕೆಟ್ಟದಾಗಿದ್ದರೆ ಅದರ ದುಷ್ಟಪರಿಣಾಮ ಸುತ್ತಲಿನ ಪರಿಸರದ ಮೇಲೂ ಆಗುತ್ತದೆ. ಆಂತರ್ಯ ಒಳ್ಳೆಯದಾಗಿದ್ದರೆ ಆಗಲೂ ಅದರ ಒಳಿತಿನಿಂದಾಗಿ ಸಮಾಜವೂ ಸುಖಿಯಾಗುತ್ತದೆ.ಆದ್ದರಿಂದಲೇ ಮಹಾತ್ಮರನ್ನು ತಪಸ್ವಿಗಳನ್ನು ಸಂತರನ್ನು ಸಂದರ್ಶಿಸಿ ಅವರ ಅನುಗ್ರಹವನ್ನು ಪಡೆಯಬೇಕೆಂಬ ಕ್ರಮ ರೂಢಿಯಲ್ಲಿದೆ. ಊರಿನ ಮುಖ್ಯಸ್ಥ ಸರಿಯಾಗಿದ್ದಾರೆ ಊರಿನ ಜನರೂ ಸರಿದಾರಿಯಲ್ಲಿರುತ್ತಾರೆ…. Continue Reading →