ಗೋಕರ್ಣ: ಸಾತ್ವಿಕತೆ ದೈವೀಗುಣ. ಇದು ಲೋಕೋಪಕಾರಕ. ಆದರೆ ಕಾಲದ ಮಹಿಮೆಯಿಂದಲೋ ಅಥವಾ ವ್ಯಕ್ತಿಯ ಪೂರ್ವದೋಷಗಳಿಂದಲೋ ಒಮ್ಮೊಮ್ಮೆ ಸಾತ್ವಿಕ ಕುಲದಲ್ಲಿ ಹುಟ್ಟಿದ ವ್ಯಕ್ತಿಗಳೂ ಆಸುರೀ ಸ್ವಭಾವವನ್ನು ಹೊಂದಿ ಲೋಕಕಂಟಕರಾಗಿ ಪರಿವರ್ತನೆ ಹೊಂದುವುದುಂಟು. ವಿಷ್ಣುವಿನ ಅಂತರಂಗಭಕ್ತರಾಗಿದ್ದೂ ತಮ್ಮ ಅಪರಾಧದಿಂದ ಶಾಪಗ್ರಸ್ತರಾಗಿ ಭೂಮಿಗೆ ಬಿದ್ದು ರಾವಣ, ಕುಂಭಕರ್ಣರಾಗಿ ಜನಿಸಿದ ಜಯವಿಜಯರೇ ಇದಕ್ಕೆ ಉದಾಹರಣೆ. ತಂದೆ ಪರಮತಪಸ್ವಿಯಾದ ವಿಶ್ರವಸ್. ಅಣ್ಣ ಮಾನವನಾಗಿ… Continue Reading →
ಗೋಕರ್ಣ: ಪರಮಾತ್ಮನ ಅನುಗ್ರಹದಿಂದ ಈ ಲೋಕದಲ್ಲಿ ಜನಿಸಿದ ಜೀವಿ ಕೇವಲ ತನಗಾಗಿ ಬದುಕದೆ ಅನ್ಯರ ನೋವು, ನಲಿವುಗಳಲ್ಲಿಯೂ ಪಾಲ್ಗೊಳ್ಳಬೇಕು. ಸಮಾಜದ ಋಣವನ್ನು ತೀರಿಸಬೇಕು. ಮರಗಿಡಗಳೂ. ನದಿ, ಗೋವುಗಳೂ ಇಂತಹ ಆದರ್ಶಕ್ಕೆ ಮಾದರಿಯಾಗಿವೆ. ಯಾವ ನದಿಯೂ ತನ್ನ ನೀರನ್ನು ತಾನೇ ಕುಡಿಯುವುದಿಲ್ಲ. ಲೋಕದಲ್ಲಿ ಯಾವ ಮರವೂ ತನ್ನ ಹಣ್ಣನ್ನು ತಾನೇ ತಿನ್ನುವುದಿಲ್ಲ. ಇಂತಹ ಪರೋಪಕಾರಿ ಬದುಕು ನಮ್ಮದಾದರೆ ಜೀವನ… Continue Reading →
ಗೋಕರ್ಣ. ಜು. ೧೮: ವೈಕುಂಠ ವೆಂದರೆ ಗಮನದ ಕೊನೆ. ಅದನ್ನು ಸೇರಿದ ಮೇಲೆ ಮುಂದೆ ಗತಿಯಿಲ್ಲ. ಸರ್ವಜೀವಿಗಳ ಶಾಶ್ವತಾನಂದದ ಚರಮಲಕ್ಷ್ಯವದು. ಜೀವರು ಸತತಸಾಧನೆಯ ಬಲದಿಂದ ತದೇಕಪ್ರವಣತೆಯಿಂದ ಪಡೆಯಬಹುದಾದ ಪರಮಪದ. ಸುಖದ ಪರ್ಯಾಯವಾದ ಆನಂದದ ಅನ್ವೇಷಣೆಯೇ ನಮ್ಮ ಬದುಕು. ನಮ್ಮ ಮೂಲನೆಲೆಯಾದ ಅದನ್ನು ಪಡೆಯುವವರೆಗೂ ನಮ್ಮ ಹುಡುಕಾಟ, ಚಡಪಡಿಕೆ ತಪ್ಪುವುದಿಲ್ಲ. ಯಾವಾಗ ಬಿಂದುರೂಪರಾದ ನಾವು ಮಹಾಸಿಂಧುಸದೃಶವಾದ ಆ… Continue Reading →
|| ಹರೇ ರಾಮ || ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ವಿಶಿಷ್ಟ ಕಲ್ಪನೆಯ ವಿಭಿನ್ನ ಕಾರ್ಯಗಳಲ್ಲಿ ಕಲಶಪ್ರಾಯವಾದದ್ದು ಶ್ರೀಚಂದ್ರಮೌಳೀಶ್ವರ ದೇವಸ್ಥಾನ. ಶ್ರೀರಾಮಚಂದ್ರಾಪುರಮಠದಲ್ಲಿ ನಿರ್ಮಾಣಗೊಳ್ಳುತ್ತಿರುವ ಪರಶಿವನ ಈ ಪವಿತ್ರ ದೇಗುಲ ಅನನ್ಯವಾದದ್ದು. ಪುಣ್ಯನದಿ ಶರಾವತಿಯ ತಟದಲ್ಲಿ ದಿವ್ಯ ಸರೋವರದ ನಡುವೆ ಮಹಾ ಗಣಪತಿಯೊಂದಿಗೆ ಚಂದ್ರಮೌಳೀಶ್ವರನ ಸನ್ನಿಧಿ ಇಲ್ಲಿ ರಾರಾಜಿಸಲಿದೆ. ಭರದಿಂದ ಸಾಗಿದ ಸಹಸ್ರಮಾನದ ನಿರ್ಮಿತಿಯ ಕಾರ್ಯ… Continue Reading →
04, ಜೂನ್; 2011, ಶನಿವಾರ: ಹರೇರಾಮ e-ಮಠದಂಗಳ ಮತ್ತು ಹರೇರಾಮದ ಓದುಗರನ್ನೊಳಗೊಂಡ ಹರೇರಾಮ ತಂಡಕ್ಕೆ ಸಂಭ್ರಮದ ದಿನ. ಶ್ರೀ ಗುರುಗಳ ದಿವ್ಯ ಉಪಸ್ಥಿತಿಯಲ್ಲಿ, ಶ್ರೀ ಶ್ರೀ ರಾಘವೇಂದ್ರ ಭಾರತೀ ಸ್ವಾಮೀಜಿಗಳ ದಿವ್ಯ ಅನುಭೂತಿಯಿರುವ ಶ್ರೀ ರಾಮಾಶ್ರಮದ ಅಂಗಣದಲ್ಲಿ, ಶ್ರೀಮಠದ ಮುಖವಾಣಿಯಾದ, ಶ್ರೀ ಗುರುಗಳ ಅಂತರ್ಜಾಲ ತಾಣವಾದ ಹರೇರಾಮ e-ಮಠದಂಗಳದ ಶ್ರೀ ಗುರುಗಳ ಮತ್ತು ಶ್ರೀ ಗುರುಗಳ… Continue Reading →