ಗೋಕರ್ಣ. 19: ಶಿವ-ಪಾರ್ವತಿಯರು ಈ ಲೋಕದ ಆದಿದಂಪತಿಗಳು. ಇವರ ಸಂಸಾರದ ಫಲವೇ ಈ ಪ್ರಪಂಚ. ಸನಾತನರು ಇದನ್ನೇ ಶಿವ-ಶಕ್ತಿ ಎಂದು ಉಲ್ಲೇಖಿಸಿದ್ದಾರೆ. ಶಿವನ ಮೊದಲ ಪತ್ನಿ ದಕ್ಷಪುತ್ರಿಯಾದ ಸತೀದೇವಿ. ತಂದೆಯು ಮಾಡಿದ ಅವಮಾನದಿಂದ ನೊಂದ ಸತೀದೇವಿ ಯೋಗಾಗ್ನಿಯಲ್ಲಿ ತನ್ನನ್ನು ತಾನು ಸುಟ್ಟುಕೊಂಡಳು. ಶಿವ ಪತ್ನೀ ರಹಿತನಾದ.ಶಿವನ ದಾಂಪತ್ಯದ ಫಲರೂಪವಾಗಿ ಜನಿಸುವ ಸ್ಕಂದನಿಂದಲೇ ತಾರಕಾಸುರನ ಸಂಹಾರವಾಗಬೇಕಾದಾಗ ದೇವತೆಗಳು… Continue Reading →
ಗೋಕರ್ಣ.19. ಲೋಕಪಾವನೆಯಾಗಿ ದೇವಲೋಕದಿಂದ ಇಳಿದುಬಂದ ಗಂಗೆ ಕೇವಲ ಜಲಸ್ವರೂಪಳಲ್ಲ. ನದಿಯಾಗಿ ನಾಡಿಗರಿಗೆ ಸಮೃದ್ಧವಾದ ಬದುಕನ್ನು ಕಟ್ಟಿಕೊಡುವ ಈ ನದಿ ನಾವು ಪಡೆಯುವ ಜ್ಞಾನಕ್ಕೆ ಸಂಕೇತವೂ ಆಗುತ್ತಾಳೆ ಎಂಬುದನ್ನು ಶ್ರೀಮದಾಚಾರ್ಯ ಶಂಕರ ಭಗವತ್ಪಾದರು ತಮ್ಮ ಮಾತಿನಲ್ಲಿ ಉಲ್ಲೇಖಿಸುತ್ತಾರೆ. ಸೂರ್ಯವಂಶ ಸಂಜಾತರಾದ ಸಗರಪುತ್ರರ ಸದ್ಗತಿಗಾಗಿ ರಾಜಾ ಭಗೀರಥನ ಪ್ರಯತ್ನದಿಂದ ಅವನನ್ನು ಅನುಸರಿಸಿದ ಗಂಗೆ ದಾರಿಯಲ್ಲಿ ಜಹ್ನು ಮಹರ್ಷಿಯ ಆಶ್ರಮವನ್ನು… Continue Reading →
ಗೋಕರ್ಣ 17. ನಮ್ಮ ಉದ್ಧಾರಕ್ಕಾಗಿ ನಮ್ಮಮೇಲಿನ ವಾತ್ಸಲ್ಯದಿಂದ ಪರಮಾತ್ಮ ಲೋಕದಿಂದ ಇಳಿದು ಬಂದು ನಮ್ಮ ಕಷ್ಟಗಳನ್ನು ನೋವನ್ನು ಪರಿಹರಿಸಿ ಶಾಶ್ವತಸುಖವನ್ನು ಅನುಗ್ರಹಿಸುತ್ತಾನೆ. ಇದಕ್ಕೇ ಅವತಾರ ಎಂದು ಹೆಸರು. ಈ ರೀತಿಯಲ್ಲಿ ಲೋಕದ ಜನರ ಪಾಪವನ್ನು ತೊಳೆಯಲು ಕಳೆಯಲು ಕಾರಣವಾದ ದೇವಗಂಗೆಯೂ ಇಳಿದುಬಂದವಳೇ. ಲೋಕಕ್ಕೇ ಆದರ್ಶಪ್ರಾಯರಾದ ಸೂರ್ಯವಂಶದ ಚಕ್ರವರ್ತಿಗಳ ಕೊಡುಗೆ. ಮನುಕುಲಕ್ಕೇ ಇಂತಹ ತಾಯಿಯನ್ನು ನೀಡಿದ ಅವರು… Continue Reading →
ಪರಮ ಪೂಜ್ಯರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಅತ್ಯಮೂಲ್ಯ ಪ್ರವಚನದೊಂದಿಗೆ ವಿವಿಧ ದೃಶ್ಯ ಶ್ರಾವ್ಯ ಕಲಾ ಮಾಧ್ಯಮಗಳ ಮೂಲಕ ಶ್ರೀ ಮದ್ವಾಲ್ಮೀಕೀ ರಾಮಾಯಣದ ಪುನರವತರಣದ “ಶ್ರೀ ರಾಮಕಥಾ” ಮಾಲಿಕಾ ಸರಣಿ ಮಂಗಳೂರಿನ ಶ್ರೀ ಭಾರತೀ ಕಾಲೇಜು ಪ್ರಾಂಗಣದಲ್ಲಿ ಜನವರಿ 28 ರ ಸಾಯಂ ಸಂಧ್ಯೆ ಸರಿಯಾದ ಸಮಯಕ್ಕೇ ಆರಂಭಗೊಂಡಿತು. ಶ್ರೀ ಸಂಸ್ಥಾನದೊಂದಿಗೆ… Continue Reading →
ಗೋಕರ್ಣ. ಸೂರ್ಯನಿಂದ ಪ್ರಾರಂಭಗೊಂಡ ಇಕ್ಷ್ವಾಕು ವಂಶದ ರಾಜರೆಲ್ಲ ಗರ್ಭದಿಂದಲೇ ಪರಿಶುದ್ಧರು. ಸೂರ್ಯನಂತೆಯೇ ಪ್ರಖರತೇಜಸ್ವಿಗಳು. ಫಲಸಿದ್ಧಿಯವರೆಗೂ ನಿರಂತರವಾಗಿ ಪರಿಶ್ರಮ ಪಟ್ಟವರು. ಚತುಸ್ಸಮುದ್ರ ಪರ್ಯಂತವಾದ ವಿಶಾಲವಾದ ಭೂಖಂಡಕ್ಕೆ ಒಡೆಯರಾದವರು, ಸಮಯ ಬಂದಾಗ ಸ್ವರ್ಗಕ್ಕೆ ಹೋಗಿ ದೇವತೆಗಳಿಗೂ ಕೂಡಾ ಸಹಾಯ ಮಾಡುತ್ತಿದ್ದ ಪರಾಕ್ರಮಿಗಳು. ಚಂದ್ರನಲ್ಲಿ ಕಳಂಕವಿದೆ. ಆದರೆ ಸೂರ್ಯನಲ್ಲಿ ಅದಿಲ್ಲ. ಅದರಂತೆಯೇ ಈ ವಂಶದವರಲ್ಲಿಯೂ ಎಲ್ಲಿಯೂ ದೋಷದ ಲೇಶವೂ ಇಲ್ಲ…. Continue Reading →
ಗೋಕರ್ಣ- ಮಹಾತ್ಮರು ಎಂದೂ ತಮ್ಮ ಸ್ವಾರ್ಥಕ್ಕಾಗಿ ಬದುಕುವವರಲ್ಲ. ಲೋಕೋಪಕಾರವೇ ಅವರ ಜೀವನೋದ್ದೇಶ. ನಮ್ಮ ಜೀವನದ ಭಾಗ್ಯದಿಂದಾಗಿಯೇ ಅಂತಹ ಮಾರ್ಗದರ್ಶಕ ಗುರು ಸಿಗುತ್ತಾನೆ. ಆಗ ಅವರನ್ನನುಸರಿಸಿದರೆ ಮಾತ್ರ ಬದುಕಿನ ಎಲ್ಲ ಒಳಿತುಗಳನ್ನು ಪಡೆಯಬಹುದು. ಆದರೆ ಸಂತ ಸಮಾಗಮ ಸುಲಭವಲ್ಲ. ಇದಕ್ಕೆ ನಮ್ಮ ನಿರಂತರ ಸಾಧನೆ, ಪರಿಶ್ರಮ, ಕಾತರ ಅಗತ್ಯ. ಪಡೆಯುವ ಅರ್ಹತೆಯೂ ಇರಬೇಕು. ಇಂತಹ ಸನ್ಮಾರ್ಗ ಪ್ರವರ್ತಕರಾದ… Continue Reading →
ಗೋಕರ್ಣ. ರಾಜ್ಯದ ಮಾಜಿ ಶಿಕ್ಷಣ ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ ಅವರು ದಿ. 9 ಗುರುವಾರದಂದು ಶ್ರೀಕ್ಷೇತ್ರಗೋಕರ್ಣಕ್ಕೆ ಆಗಮಿಸಿ ಸಾರ್ವಭೌಮ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಆತ್ಮಲಿಂಗವನ್ನು ಅರ್ಚಿಸಿದರು. ಈ ಸಂದರ್ಭದಲ್ಲಿ ತಮ್ಮ ಆಶಯವನ್ನು ವ್ಯಕ್ತಪಡಿಸಿದ ಶ್ರೀ ಚಂದ್ರಶೇಖರ ಗೋಕರ್ಣ ಪರಶಿವನ ಆತ್ಮಲಿಂಗವನ್ನೇ ಪಡೆದು ಭೂಕೈಲಾಸ ಎಂದು ಪ್ರಸಿದ್ಧವಾದ ದಿವ್ಯಸನ್ನಿಧಿ. ಪ್ರಾಚೀನ ಕಾಲದಿಂದಲೂ ವಿದ್ಯಾ… Continue Reading →