ಗೋಕರ್ಣ: ೩. ಉಪಕಾರಸ್ಮರಣೆ, ಕೃತಜ್ಞತೆಗಳು ಜೀವಿಯ ಮೂಲಭೂತ ಸ್ವಭಾವ. ಸಾಕುಪ್ರಾಣಿಗಳೂ ಕೂಡಾ ನಾವು ಎಂದೋ ಹಾಕಿದ ಆಹಾರವನ್ನು, ತೋರಿಸಿದ ಪ್ರೀತಿಯನ್ನು ಮರೆಯದೆ ಅದನ್ನು ವ್ಯಕ್ತಪಡಿಸುತ್ತವೆ. ಮಾನವನೆಂದೂ ಕೃತಘ್ನನಾಗಬಾರದು. ಅನ್ನ ಹಾಕಿದ ಮನೆಗೆ ಕನ್ನ ಹಾಕುವುದು ರಾಕ್ಷಸತ್ವದ ದ್ಯೋತಕ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀ ಶ್ರೀಮದ್ರಾಘವೇಶ್ವರ ಭಾರತೀ ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ. ಇಂದು ಅಶೋಕೆಯಲ್ಲಿ ಚಾತುರ್ಮಾಸ್ಯದ ನಿಮಿತ್ತ ಆಯೋಜಿತವಾಗಿದ್ದ ರಾಮಕಥಾದಲ್ಲಿ… Continue Reading →
ಗೋಕರ್ಣ: ಸ್ನೇಹ, ಪ್ರೀತಿಗಳು ಬದುಕಿನಲ್ಲಿ ಸಂತೋಷವನ್ನು ನೀಡುವ ಸಾಧನಗಳು. ವ್ಯಕ್ತಿತ್ವದ ಉತ್ತಮಿಕೆಗೆ ಅಭ್ಯುದಯಕ್ಕೆ ಕಾರಣವಾಗುವ ಉತ್ತಮ ಬಾಂಧವ್ಯವನ್ನು ಬೆಳೆಸುವ ಈ ಗುಣಗಳು ಜೀವನದಲ್ಲಿ ಅವಿನಾಭಾವಿಯಾಗಿದ್ದರೆ ನಮ್ಮ ಬಾಳು ಸಾರ್ಥಕವಷ್ಟೇ ಅಲ್ಲ, ಆದರ್ಶವೂ ಕೂಡ. ನಮಗಾಗಿ ಮಾತ್ರ ಬದುಕದೆ ಪರೋಪದ್ರವಿಯಾಗದೆ ಸುತ್ತೆಲ್ಲ ಸಂತಸವನ್ನು ಹಂಚುತ್ತ ಜೀವಿಸಿದರೆ ಅದಕ್ಕಿಂತ ಹೆಚ್ಚಿನದು ಬೇರೇನೂ ಇಲ್ಲ ಎಂದು ಶ್ರೀ ರಾಮಚಂದ್ರಾಪುರಮಠದ ಶ್ರೀ… Continue Reading →
ಹರೇ ರಾಮ ||ಶ್ರೀ ಶಂಕರಾಚಾರ್ಯ ವಿರಚಿತ ಏಕಶ್ಲೋಕೀ ಗಣಪತಿ ಸ್ತೋತ್ರಮ್|| ಗಳದ್ದಾನ ಗಂಡಂ ಮಿಳದ್ಭೃಂಗ ಖಂಡಂ | ಚಲಚ್ಚಾರುಶುಂಡಂ ಜಗತ್ರಾಣಶೌಂಡಮ್ || ಲಸದ್ದಂತಕಾಂಡಂ ವಿಪದ್ಭಂಗಚಂಡಂ | ಶಿವಪ್ರೇಮ ಪಿಂಡಂ ಭಜೇ ವಕ್ರ ತುಂಡಮ್ || (ಯಾರ ಗಲ್ಲದಿಂದ ಮದೋದಕವು ಸುರಿಯುತ್ತಿರುವುದೋ, (ಆ ವಾಸನೆಗೆ) ಭ್ರಮರವು ಗುಂಪಾಗಿ ಮುತ್ತಿರುವುದೋ, ಯಾರ ಸುಂದರ ಸೊಂಡಿಲು ಚಲಿಸುತ್ತಿರುವುದೋ, ಜಗತ್ತನ್ನು ರಕ್ಷಿಸುವಲ್ಲಿ ಕುಶಲನೋ,… Continue Reading →
ಗೋಕರ್ಣ: ಲೋಕದಲ್ಲಿ ಸಾವಿರಾರು ವಸ್ತುಗಳಿವೆ. ಆದರೆ ಅವೆಲ್ಲವೂ ಸಾವನ್ನು ಹೊಂದಿದವೇ. ಆದರೆ ಸಾವಿರದ ಒಂದು ಸ್ಥಾನವಿದ್ದರೆ ಅದು ಭಗವಂತನ ಸಾನ್ನಿಧ್ಯ ಮಾತ್ರ. ಹಣಬಲದಿಂದಲೋ, ತೋಳಿನಶಕ್ತಿಯಿಂದಲೋ, ಅಧಿಕಾರದಿಂದಲೋ ಅದನ್ನು ಪಡೆಯಲು ಅಸಾಧ್ಯ. ಪರಮಾತ್ಮನ ಮೇಲಿನ ಅಸಾಧಾರಣ ಪ್ರೀತಿಯಿಂದ ಅನನ್ಯ ಶರಣತೆಯಿಂದ ಮಾತ್ರ ನಾವು ಆಸ್ಥಾನವನ್ನು ಸೇರಬಹುದು. ಅದಕ್ಕೆ ಅವನ ಕರುಣೆಯೂ ಬೇಕು ಎಂದು ಶ್ರೀ ರಾಮಚಂದ್ರಾಪುರಮಠದ ಪೂಜ್ಯ… Continue Reading →
ಭಾರತೀಯ ಗೋವಂಶ ಪರಿಚಯ ಗೋವು ಒಂದು ಆಪ್ತ ಪರಿಚಯ ’ಗೋವು’ ಶಬ್ದ ಕೇಳಿದೊಡನೆಯೇ ಹಳೆಯ ಸವಿ ನೆನಪುಗಳು ಮನಸ್ಸನ್ನು ಅಮರಿಕೊಳ್ಳುತ್ತವೆ. ಮನೆಯ ಪಕ್ಕದಲ್ಲಿರುತ್ತಿದ್ದ ಕೊಟ್ಟಿಗೆ. ಮುಂಜಾವಿನ ಚುಮುಚುಮು ಬೆಳಗು ಬಿಚ್ಚಿಕೊಳ್ಳುತ್ತಿದ್ದುದು ಈ ಕೊಟ್ಟಿಗೆಯೊಳಗಿಂದ. ಮನೆಯ ಮನಗಳನ್ನು ಅರಳಿಸಲು ಹಾಲಿಗಾಗಿ ಅಮ್ಮಂದಿರು ಕೈಯಲ್ಲಿ ತಂಬಿಗೆ ಹಿಡಿದು ಅತ್ತ ತೆರಳುತ್ತಿದ್ದರು. ಹಸುವಿನ ಮೈದಡವಿ, ತಾವಿಟ್ಟ ಪ್ರೀತಿಯ ಹೆಸರಿನಿಂದ ಮಾತನಾಡಿಸುತ್ತ,… Continue Reading →
ಗೋಕರ್ಣ: ಸಾಮಾಜಿಕವಾದ ಅನೇಕ ಋಣಗಳು ನಮ್ಮ ಮೇಲಿವೆ. ದೀನರ ಆರ್ತರ ಕಣ್ಣೊರೆಸುವುದೂ ಒಂದು ಭಗವತ್ಪ್ರೀತಿ ಸಾಧನವಾದ ಕಾರ್ಯವೇ. ಸಾಧ್ಯವಾದಷ್ಟರಮಟ್ಟಿಗೆ ನಮ್ಮಿಂದ ಇನ್ನೊಬ್ಬರಿಗೆ ಸಹಾಯ, ಸಹಕಾರಗಳು ಲಭ್ಯವಾಗುವ ರೀತಿಯಲ್ಲಿ ಬಾಳಬೇಕು. ಆಗ ಮಾತ್ರ ಬದುಕಿನ ಸಾರ್ಥಕತೆ ಎಂದು ಶ್ರೀ ರಾಮಚಂದ್ರಾಪುರಮಠದ ಶ್ರೀ ಶ್ರೀಮದ್ರಾಘವೇಶ್ವರ ಭಾರತೀ ಶ್ರೀಗಳು ಹೇಳಿದ್ದಾರೆ. ಇಂದು ಸಮೀಪದ ಅಶೋಕೆಯಲ್ಲಿ ಚಾತುರ್ಮಾಸ್ಯದ ನಿಮಿತ್ತ ಹೊರನಾಡಿನ ಚೆನ್ನೈ… Continue Reading →