ಗೋರಕ್ಷಣೆಗಾಗಿ ಸೀಮೋಲ್ಲಂಘನ ಮಾಡಿ ಬೆಂಗಳೂರು : ಕಸಾಯಿಖಾನೆಗೆ ಹೋಗುತ್ತಿದ್ದ ಧವಳಗಿರಿ ನಂದಿಗೆ ಅಭಯವನ್ನು ನೀಡುವುದರ ಮೂಲಕ ಆರಂಭವಾದ ಗೋಚಾತುರ್ಮಾಸ್ಯ ಯಾವುದೇ ವಿಘ್ನಗಳಿಲ್ಲದೇ ನಿರ್ವಿಘ್ನವಾಗಿ ಪರ್ಯವಸಾನವಾಗಿದೆ. ಈ ಬಾರಿ ಚಾತುರ್ಮಾಸ್ಯದಲ್ಲೂ ಮಠದ ಮೇಲೆ ಆಕ್ರಮಣದ ಪ್ರಯತ್ನಗಳಾಗಿವೆ, ಆದರೆ ಗೋವಿನ ಹೆಸರಿನಲ್ಲೇ ಕಷ್ಟಗಳನ್ನು ನಿವಾರಿಸುವ ಶಕ್ತಿ ಇರುವುದರಿಂದ ಯಾವುದೇ ಕೆಡುಕಿನ ಉದ್ದೇಶದ ಪ್ರಯತ್ನಗಳೂ ಸಫಲವಾಗಿಲ್ಲ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ… Continue Reading →
ಶ್ರೀಕ್ಷೇತ್ರ ಗೋಕರ್ಣ – ಶಿವರಾತ್ರಿ ಮಹೋತ್ಸವ ಪುರಾಣ ಪ್ರಸಿದ್ದ ಶ್ರೀಕ್ಷೇತ್ರ ಗೋಕರ್ಣದ ಸಾರ್ವಭೌಮ ಮಹಾಬಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ದಿವ್ಯ ಮಾರ್ಗದರ್ಶನದಲ್ಲಿ ದಿನಾಂಕ 02/03/2016 ರಿಂದ 09/03/2016ವರೆಗೆ ಹಲವಾರು ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ತಳಿಲುತೋರಣ – ವಿದ್ಯುದ್ದೀಪಾಲಂಕಾರಗಳಿಂದ ದೇವಾಲಯದ ಪರಿಸರವನ್ನು ಶೃಂಗರಿಸಲಾಗಿದೆ. ದಿನಾಂಕ 07/03/2016 ಸೋಮವಾರ ಶಿವರಾತ್ರಿಯ ಶಿವಯೋಗದ ಶುಭಪರ್ವದಂದು… Continue Reading →
||ಹರೇ ರಾಮ||
ರಾಜನೆಂದರೆ ರಾಜ್ಯದ ಆತ್ಮ..
ಮಂತ್ರಿಯೆಂದರೆ ರಾಜ್ಯದ ಬುದ್ಧಿ..
ಯಾವುದರ ಪರಿವೆ ಇಲ್ಲದೆಯೂ ಆತ್ಮವು ಇರಬಹುದು…ಆದರೆ ಬುದ್ಧಿಯು ಸದಾ ಎಚ್ಚರವಾಗಿರಲೇಬೇಕು…ಶರೀರದ, ಮನಸ್ಸಿನ,ಇಂದ್ರಿಯಗಳ,ಹೆಚ್ಚೇಕೆ ಬದುಕಿನ ಸಮಸ್ತ ಆಗು-ಹೋಗುಗಳನ್ನು ಗಮನಿಸುವ-ನಿಯಂತ್ರಿಸುವ ಹೊಣೆಗಾರಿಕೆ ಅದರದ್ದೇ ಅಲ್ಲವೇ..?
ಮನನವೆಂದರೆ ಅರಿಯುವುದು..
ತ್ರಾಣವೆಂದರೆ ಪೊರೆಯುವುದು…
ಮನನ-ತ್ರಾಣಗಳೆರಡೂ ಹುದುಗಿವೆ ಮಂತ್ರದಲ್ಲಿ..
ಮಂತ್ರವುಳ್ಳವನು ಮಂತ್ರಿಯೆಂದಾದಮೇಲೆ ಆತನಿಗೆ ಎರಡೇ ಮುಖ್ಯಕಾರ್ಯಗಳು..
ಅರಿಯುವುದು ಮತ್ತು ಪೊರೆಯುವುದು…
ಎಲ್ಲವನ್ನೂ ಅರಿಯುವ, ತನ್ಮೂಲಕ ಎಲ್ಲರನ್ನೂ ಪೊರೆಯುವ ಕರ್ತವ್ಯವವನದ್ದು..
ಅರಿವು ಪೊರೆಯುವಂತೆ ಮತ್ಯಾವುದು ತಾನೇ ಪೊರೆಯಲು ಸಾಧ್ಯ..?
ಬೇಕೇ ಈ ಕೆಲಸ ?
ನಿರಂತರ ಪರಿಭ್ರಮಣ..
ದಿನಕ್ಕೊಂದು ಊರು..
ಹೊತ್ತಿಗೊಂದು ಸೂರು..
ಹತ್ತಾರು ಬಗೆಯ ನೀರು..!
ನಿನ್ನೆ ಇಲ್ಲಿರಲಿಲ್ಲ; ನಾಳೆ ಇನ್ನೆಲ್ಲಿಯೋ?….
ಇಂದು ಬಯಲುಸೀಮೆಯೆಡೆ..ನಾಳೆ ಮಲೆನಾಡ ಕಡೆ.
ಇಂದು ಆಗಸ ಹರಿದು ಬೀಳುವಂತೆ ಮಳೆ..ನಾಳೆ ಮೈಯೆಲ್ಲ ಬೆವರ ಹೊಳೆ..
ಮಾನವನ ಮೊದಲ ಬೇಕುಗಳು ಊಟ-ನಿದ್ರೆಗಳು..
ಊಟವೋ ಅದೃಷ್ಟದಾಟ..!
ಒಮ್ಮೊಮ್ಮೆ ಇಲ್ಲವೇ ಇಲ್ಲ..
ಇದ್ದರೂ ಬೇಕಾದಷ್ಟು ಇಲ್ಲದಿರಬಹುದು..
ಬೇಕಾದ ಬಗೆಯಲ್ಲಿ ಇಲ್ಲದಿರಬಹುದು..
ಇದ್ದರೂ ಪ್ರೀತಿಪೂರ್ವಕವಲ್ಲದಿರಬಹುದು..
ತಲುಪುವಾಗ ತಿನ್ನಲು ಸಮಯವೇ ಇಲ್ಲದಿರಬಹುದು..
ಇಂದು ಸೊಗಸಿಲ್ಲದ ಸಪ್ಪೆ..ನಾಳೆ ಕಿವಿಯಲ್ಲಿ ಹೊಗೆಯೇಳುವ ಖಾರ..!